ಬೆಳಗಾವಿ: ‘ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಪ್ರತಿಷ್ಠಾಪನೆ ವಿಷಯವು ಸ್ಥಳೀಯ ಸಮಸ್ಯೆಯಾಗಿದ್ದು, ಸ್ಥಳೀಯರೇ ಬಗೆಹರಿಸಿಕೊಳ್ಳುತ್ತಾರೆ. ಮುಂಬೈನವರು, ದೆಹಲಿಯವರು, ಬೆಂಗಳೂರಿನವರ ಮಧ್ಯೆಸ್ಥಿಕೆಯ ಅಗತ್ಯವಿಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಶಿವಸೇನಾ ಮುಖಂಡ ಸಂಜಯ ರಾವುತ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.