ಹೊಸದುರ್ಗ: ‘ಕುಂಚಿಟಿಗ ಸಮಾಜದ ಕುಲಶಾಸ್ತ್ರೀಯ ಅಧ್ಯಯನ ಪೂರ್ಣಗೊಂಡಿದೆ. ಆದರೆ ಸರ್ಕಾರ ಕುಂಚಿಟಿಗರಿಗೆ ಪ್ರವರ್ಗ-1 ಅಥವಾ 2 ‘ಎ’ ಮೀಸಲಾತಿ ಸೌಲಭ್ಯ ಕಲ್ಪಿಸುತ್ತಿಲ್ಲ. ಈ ಸೌಲಭ್ಯ ಪಡೆಯಲು ಸತ್ಯಾಗ್ರಹ ಆರಂಭಿಸಲಾಗುವುದು’ ಎಂದು ಇಲ್ಲಿನ ಕುಂಚಿಟಿಗ ಮಹಾಸಂಸ್ಥಾನದ ಶಾಂತವೀರ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಮಧುಗಿರಿ ತಾಲ್ಲೂಕಿನ ಹೊಸಕೆರೆ ಗ್ರಾಮದಲ್ಲಿ ಮಾತನಾಡಿದರು.