ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾವರ್ಕರ್‌ ಚಿತ್ರ: ಕಿಡಿಗೇಡಿಗಳ ಕೃತ್ಯ– ದೂರು ದಾಖಲು

Last Updated 7 ಅಕ್ಟೋಬರ್ 2022, 13:41 IST
ಅಕ್ಷರ ಗಾತ್ರ

ಮಂಡ್ಯ: ಭಾರತ್‌ ಜೋಡೊ ಯಾತ್ರೆ ವೇಳೆ ಫ್ಲೆಕ್ಸ್‌ನಲ್ಲಿ ವಿ.ಡಿ.ಸಾವರ್ಕರ್‌ ಚಿತ್ರ ಕಂಡು ಬಂದಿದ್ದು ಇದು ಬಿಜೆಪಿಯ ಕಿಡಿಗೇಡಿಗಳ ಕೃತ್ಯವಾಗಿದೆ. ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಡಿ.ಗಂಗಾಧರ್‌ ಶುಕ್ರವಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ.

‘ನಮ್ಮ ನಾಯಕರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಹಾಗೂ ಶಾಸಕ ಹ್ಯಾರಿಸ್‌ ಚಿತ್ರಗಳ ಜೊತೆ ಸಾವರ್ಕರ್‌ ಭಾವಚಿತ್ರವುಳ್ಳ ಫೆಕ್ಸ್‌ ಅಳವಡಿಸಲಾಗಿದೆ. ಇದು ಕಣ್ತಪ್ಪಿನಿಂದ ಆದ ತಪ್ಪಲ್ಲ, ಭಾರತ್‌ ಜೋಡೊ ಯಾತ್ರೆಗೆ ಕೆಟ್ಟ ಹೆಸರು ತರುವ ದೃಷ್ಟಿಯಿಂದ ಸಾವರ್ಕರ್‌ ಭಾವಚಿತ್ರವುಳ್ಳ ಫ್ಲೆಕ್ಸ್‌ಗಳನ್ನು ಅಳವಡಿಸುತ್ತಿರುವ ವಿಷಯ ಗೊತ್ತಾಗಿದೆ. ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ದೂರಿನ ಪ್ರತಿಯನ್ನು ಕೆಪಿಸಿಸಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ್ದು ‘ಬಿಜೆಪಿ ಡರ್ಟಿ ಪಾಲಿಟಿಕ್ಸ್‌ ಮಾಡುತ್ತಿದೆ’ ಎಂದು ಆರೋಪಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT