ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನಲ್ಲಿ 100 ಎಕರೆ ಪ್ರದೇಶವನ್ನು ಸಂಸ್ಕೃತ ವಿಶ್ವವಿದ್ಯಾಲಯ ನಿರ್ಮಾಣಕ್ಕೆ ಗುರುತಿಸಲಾಗಿದೆ. ₹ 320 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ವಿಶ್ವವಿದ್ಯಾಲಯದ ಶಂಕುಸ್ಥಾಪನೆಯನ್ನು ಇತ್ತೀಚೆಗೆಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆರವೇರಿಸಿದ್ದರು. ಇದನ್ನು ವಿರೋಧಿಸಿರುವ ರಕ್ಷಣಾ ವೇದಿಕೆ, ‘#ಸಂಸ್ಕೃತವಿವಿಬೇಡ’ ಮತ್ತು ‘#SayNoToSanskrit’ ಎಂಬ ಶೀರ್ಷಿಕೆಯಡಿ ಟ್ವಿಟರ್ ಅಭಿಯಾನ ಹಮ್ಮಿಕೊಂಡಿದೆ.