‘ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರನ್ನು ದೌರ್ಜನ್ಯ ಅಥವಾ ದಬ್ಬಾಳಿಕೆಯಿಂದ ರಕ್ಷಿಸುವುದು ಪಿಒಎ ಕಾಯ್ದೆಯ ಉದ್ದೇಶ. ಆದರೆ, ಅದನ್ನು ದುರುಪಯೋಗ ಮಾಡಿಕೊಳ್ಳಲು ಅನುಮತಿಸಲಾಗದು. ದೋಷಾರೋಪ ಪಟ್ಟಿ ಸಲ್ಲಿಸುವ ಮುನ್ನ ಎಚ್ಚರಿಕೆಯಿಂದ ನಿರ್ಧಾರ ಕೈಗೊಳ್ಳಬೇಕಾದ ಜವಾಬ್ದಾರಿ ತನಿಖಾಧಿಕಾರಿ ಮೇಲೆ ಇದೆ’ ಎಂದು ಪೀಠ ತಿಳಿಸಿದೆ.