<p><strong>ನವದೆಹಲಿ</strong>: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ವಿರುದ್ಧದ ಆರೋಪ ರದ್ದುಪಡಿಸಿದ್ದ ಹೈಕೋರ್ಟ್ನ ಆದೇಶ ಪ್ರಶ್ಮಿಸಲಾದ ಮೇಲ್ಮನವಿಯ ವಿಚಾರಣೆಯನ್ನು ಮಂಗಳವಾರ ನಡೆಸಿದ ಸುಪ್ರೀಂ ಕೋರ್ಟ್, ತೀರ್ಪನ್ನು ಕಾಯ್ದಿರಿಸಿತು.</p>.<p>ಆರೋಪಿ ಮೋಹನ್ ನಾಯಕ್ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಕೊಕಾ) ಅಡಿ ದಾಖಲಿಸಲಾದ ಆರೋಪ ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ಗೌರಿ ಅವರ ಸೋದರಿ ಕವಿತಾ ಲಂಕೇಶ್ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎ.ಎಂ. ಖನ್ವಿಲ್ಕರ್ ನೇತೃತ್ವದ ತ್ರಿಸದಸ್ಯ ಪೀಠ ಪೂರ್ಣಗೊಳಿಸಿತು.</p>.<p>ಅರ್ಜಿದಾರರ ಪರ ವಕೀಲ ಹುಝೇಫಾ ಅಹ್ಮದಿ ಹಾಗೂ ಆರೋಪಿ ಪರ ವಕೀಲ ಬಸವಪ್ರಭು ಪಾಟೀಲ ಅವರ ವಾದವನ್ನು ಪೀಠ ಆಲಿಸಿತು.</p>.<p>‘ಆರೋಪಿಯು ಪ್ರಸ್ತುತ ಪ್ರಕರಣಕ್ಕಿಂತ ಮೊದಲು ನಡೆದಿರುವ ಅಪರಾಧ ಪ್ರಕರಣಗಳ ಭಾಗವಾಗಿರಲಿಲ್ಲ’ ಎಂಬ ವಾದ ಅಪ್ರಸ್ತುತ. ಅಲ್ಲದೆ, ಘಟನೆ ನಡೆದು 4 ವರ್ಷ ಕಳೆದಿದ್ದರೂ ಪ್ರಕರಣ ಕುರಿತ ಆರೋಪಗಳನ್ನು ಅಂತಿಮಗೊಳಿಸಲಾಗಿಲ್ಲ ಎಂದು ಅಹ್ಮದಿ ಪ್ರತಿಪಾದಿಸಿದರು.</p>.<p>ಅಪರಾಧಕ್ಕೆ ಕುಮ್ಮಕ್ಕು ನೀಡಿದವರು ಮತ್ತು ನೇರವಾಗಿ ಭಾಗಿಯಾದವರ ನಡುವೆ ಕೊಕಾ ಕಾಯ್ದೆ ಅಡಿ ವ್ಯತ್ಯಾಸ ಗುರುತಿಸಲಾಗಿದೆ. ಪ್ರಕರಣಕ್ಕೆ ಕುಮ್ಮಕ್ಕು ನೀಡಿದವರನ್ನು ಅಪರಾಧದ ಗುಂಪಿನ ಸದಸ್ಯನಿಗೆ ಸಮ ಎಂದು ಪರಿಗಣಿಸಬಾರದು ಎಂದು ಆರೋಪಿ ಪರ ವಕೀಲ ಪಾಟೀಲ ಹೇಳಿದರು.</p>.<p>’ಒಬ್ಬ ವ್ಯಕ್ತಿಯನ್ನು ಸಂಘಟಿತ ಅಪರಾಧ ಗುಂಪಿನ ಸದಸ್ಯ ಎಂದು ಗುರುತಿಸುವುದು ಸರಿಯೇ?‘ ಎಂದು ಪ್ರಶ್ನಿಸಿದ ಅವರು, ಆರೋಪಿಯು ಅಪರಾಧದ ಗುಂಪು ನಡೆಸಿರುವ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗವಹಿಸಿದ್ದ ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ ಎಂದರು.</p>.<p>ಇದಕ್ಕೆ ವಿರೋಧ ವ್ಯಕ್ತಪಡಿಸಿದ ಅಹ್ಮದಿ, ಆರೋಪಿಯು ಇತರ ಆರೋಪಿಗಳಿಗೆ ಆಶ್ರಯ ನೀಡಿದ್ದರಿಂದ, ಸಂಘಟಿತ ಅಪರಾಧದ ಭಾಗ ಎಂದೇ ಪರಿಗಣಿಸಬಹುದು ಎಂದರು.</p>.<p>2017ರ ಸೆಪ್ಟೆಂಬರ್ 5ರಂದು ಬೆಂಗಳೂರಿನ ರಾಜರಾಜೇಶ್ವರಿ ನಗರದ ತಮ್ಮ ನಿವಾಸದೆದುರು ಗೌರಿ ಲಂಕೇಶ್ ಹತ್ಯೆಗೊಳಗಾಗಿದ್ದರು. ಆರೋಪಿ ನಾಯಕ್ ವಿರುದ್ಧ ಪೊಲೀಸರು ಕೊಕಾ ಅಡಿ ಸಲ್ಲಿಸಿದ್ದ ಆರೋಪಗಳನ್ನು ರಾಜ್ಯ ಹೈಕೋರ್ಟ್ ಕಳೆದ ಏಪ್ರಿಲ್ 22ರಂದು ರದ್ದುಗೊಳಿಸಿ ಆದೇಶಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ವಿರುದ್ಧದ ಆರೋಪ ರದ್ದುಪಡಿಸಿದ್ದ ಹೈಕೋರ್ಟ್ನ ಆದೇಶ ಪ್ರಶ್ಮಿಸಲಾದ ಮೇಲ್ಮನವಿಯ ವಿಚಾರಣೆಯನ್ನು ಮಂಗಳವಾರ ನಡೆಸಿದ ಸುಪ್ರೀಂ ಕೋರ್ಟ್, ತೀರ್ಪನ್ನು ಕಾಯ್ದಿರಿಸಿತು.</p>.<p>ಆರೋಪಿ ಮೋಹನ್ ನಾಯಕ್ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಕೊಕಾ) ಅಡಿ ದಾಖಲಿಸಲಾದ ಆರೋಪ ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ಗೌರಿ ಅವರ ಸೋದರಿ ಕವಿತಾ ಲಂಕೇಶ್ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎ.ಎಂ. ಖನ್ವಿಲ್ಕರ್ ನೇತೃತ್ವದ ತ್ರಿಸದಸ್ಯ ಪೀಠ ಪೂರ್ಣಗೊಳಿಸಿತು.</p>.<p>ಅರ್ಜಿದಾರರ ಪರ ವಕೀಲ ಹುಝೇಫಾ ಅಹ್ಮದಿ ಹಾಗೂ ಆರೋಪಿ ಪರ ವಕೀಲ ಬಸವಪ್ರಭು ಪಾಟೀಲ ಅವರ ವಾದವನ್ನು ಪೀಠ ಆಲಿಸಿತು.</p>.<p>‘ಆರೋಪಿಯು ಪ್ರಸ್ತುತ ಪ್ರಕರಣಕ್ಕಿಂತ ಮೊದಲು ನಡೆದಿರುವ ಅಪರಾಧ ಪ್ರಕರಣಗಳ ಭಾಗವಾಗಿರಲಿಲ್ಲ’ ಎಂಬ ವಾದ ಅಪ್ರಸ್ತುತ. ಅಲ್ಲದೆ, ಘಟನೆ ನಡೆದು 4 ವರ್ಷ ಕಳೆದಿದ್ದರೂ ಪ್ರಕರಣ ಕುರಿತ ಆರೋಪಗಳನ್ನು ಅಂತಿಮಗೊಳಿಸಲಾಗಿಲ್ಲ ಎಂದು ಅಹ್ಮದಿ ಪ್ರತಿಪಾದಿಸಿದರು.</p>.<p>ಅಪರಾಧಕ್ಕೆ ಕುಮ್ಮಕ್ಕು ನೀಡಿದವರು ಮತ್ತು ನೇರವಾಗಿ ಭಾಗಿಯಾದವರ ನಡುವೆ ಕೊಕಾ ಕಾಯ್ದೆ ಅಡಿ ವ್ಯತ್ಯಾಸ ಗುರುತಿಸಲಾಗಿದೆ. ಪ್ರಕರಣಕ್ಕೆ ಕುಮ್ಮಕ್ಕು ನೀಡಿದವರನ್ನು ಅಪರಾಧದ ಗುಂಪಿನ ಸದಸ್ಯನಿಗೆ ಸಮ ಎಂದು ಪರಿಗಣಿಸಬಾರದು ಎಂದು ಆರೋಪಿ ಪರ ವಕೀಲ ಪಾಟೀಲ ಹೇಳಿದರು.</p>.<p>’ಒಬ್ಬ ವ್ಯಕ್ತಿಯನ್ನು ಸಂಘಟಿತ ಅಪರಾಧ ಗುಂಪಿನ ಸದಸ್ಯ ಎಂದು ಗುರುತಿಸುವುದು ಸರಿಯೇ?‘ ಎಂದು ಪ್ರಶ್ನಿಸಿದ ಅವರು, ಆರೋಪಿಯು ಅಪರಾಧದ ಗುಂಪು ನಡೆಸಿರುವ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗವಹಿಸಿದ್ದ ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ ಎಂದರು.</p>.<p>ಇದಕ್ಕೆ ವಿರೋಧ ವ್ಯಕ್ತಪಡಿಸಿದ ಅಹ್ಮದಿ, ಆರೋಪಿಯು ಇತರ ಆರೋಪಿಗಳಿಗೆ ಆಶ್ರಯ ನೀಡಿದ್ದರಿಂದ, ಸಂಘಟಿತ ಅಪರಾಧದ ಭಾಗ ಎಂದೇ ಪರಿಗಣಿಸಬಹುದು ಎಂದರು.</p>.<p>2017ರ ಸೆಪ್ಟೆಂಬರ್ 5ರಂದು ಬೆಂಗಳೂರಿನ ರಾಜರಾಜೇಶ್ವರಿ ನಗರದ ತಮ್ಮ ನಿವಾಸದೆದುರು ಗೌರಿ ಲಂಕೇಶ್ ಹತ್ಯೆಗೊಳಗಾಗಿದ್ದರು. ಆರೋಪಿ ನಾಯಕ್ ವಿರುದ್ಧ ಪೊಲೀಸರು ಕೊಕಾ ಅಡಿ ಸಲ್ಲಿಸಿದ್ದ ಆರೋಪಗಳನ್ನು ರಾಜ್ಯ ಹೈಕೋರ್ಟ್ ಕಳೆದ ಏಪ್ರಿಲ್ 22ರಂದು ರದ್ದುಗೊಳಿಸಿ ಆದೇಶಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>