ಬೆಂಗಳೂರು: ‘ಲೋಕೋಪಯೋಗಿ ಇಲಾಖೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಧಿಕಾರಿ, ನೌಕರರಿಗೆ ಜ್ಯೇಷ್ಠತೆ, ಬಡ್ತಿಯಲ್ಲಿ ಅನ್ಯಾಯವಾಗುತ್ತಿದ್ದು, ನ್ಯಾಯ ಒದಗಿಸಬೇಕು’ ಎಂದು ಒತ್ತಾಯಿಸಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರಿಗೆ ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ಅಧಿಕಾರಿ, ನೌಕರರ ಸಂಘ ಅಹವಾಲು ಸಲ್ಲಿಸಿದೆ.