ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ‘ಭೂ ಒಡೆತನ ಯೋಜನೆಯಡಿ ಖರೀದಿಸುವ ಜಮೀನಿಗೆ ಮಾರ್ಗಸೂಚಿ ದರದ ಐದು ಪಟ್ಟಿನವರೆಗೂ ದರ ನೀಡುವುದಕ್ಕೆ ಅವಕಾಶ ಒದಗಿಸುವ ಕುರಿತು ಚರ್ಚೆ ನಡೆಯುತ್ತಿದೆ. ಇನ್ನೂ ಅಂತಿಮ ತೀರ್ಮಾನ ಆಗಿಲ್ಲ. ಸದ್ಯ, ಈಗ ಇರುವ ಮಿತಿಯಲ್ಲೇ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ’ ಎಂದರು.