10ರಿಂದ 20 ವರ್ಷಗಳವರೆಗೆ ಸೇವೆ ಸಲ್ಲಿಸಿರುವ ದಿನಗೂಲಿ ನೌಕರರನ್ನು ಕಾಯಂಗೊಳಿಸಲು ತೆಗೆದುಕೊಂಡ ಕ್ರಮಗಳ ವಿವರಗಳನ್ನು ಒಳಗೊಂಡ ಪ್ರಮಾಣ ಪತ್ರ ಸಲ್ಲಿಸುವಂತೆ ಸುಪ್ರೀಂಕೋರ್ಟ್, ರಾಜ್ಯ ಸರ್ಕಾರದ ಪರವಾಗಿ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಹೇಳಿತು. ಸೇವೆಯನ್ನು ಕಾಯಂಗೊಳಿಸುವಂತೆ ದಿನಗೂಲಿ ನೌಕರರು ಸಲ್ಲಿಸಿದ್ದ ಮನವಿಯನ್ನು ಸರ್ಕಾರ ಏಕೆ ತಿರಸ್ಕರಿಸಿದೆ ಎಂಬುದಕ್ಕೆ ಸ್ಪಷ್ಟನೆ ನೀಡುವಂತೆ ಪೀಠ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.