ಕಾಲ ಕಾಲಕ್ಕೆ ಹೊರಡಿಸಲಾದ ರಾಷ್ಟ್ರಪತಿಯವರ ಆದೇಶದಲ್ಲಿ ಉಲ್ಲೇಖವಾಗದ ಧರ್ಮಕ್ಕೆ ಮತಾಂತರಗೊಂಡ, ಚಾರಿತ್ರಿಕವಾಗಿ ಪರಿಶಿಷ್ಟ ಜಾತಿಯವರಾಗಿರುವವರಿಗೆ ಪರಿಶಿಷ್ಟ ಜಾತಿ ಸ್ಥಾನ ಕೊಡಬೇಕೇ ಎಂಬುದನ್ನು ಈ ಆಯೋಗವು ಪರಿಶೀಲನೆಗೆ ಒಳಪಡಿಸಲಿದೆ. ರಾಷ್ಟ್ರಪತಿಯವರ ಆದೇಶದ ಪ್ರಕಾರ, ಮತಾಂತರದ ನಂತರ ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಸಿಖ್ ಧರ್ಮವನ್ನು ಅನುಸರಿಸುವವರಿಗೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನ ದೊರೆಯುತ್ತದೆ.