<p><strong>ಬೆಂಗಳೂರು:</strong> ‘ಹಿರಿಯ ನಾಗರಿಕರ ಪ್ರತಿಭೆ ಸದ್ಬಳಕೆ ಮಾಡಿಕೊಳ್ಳಲು ಹೊಸ ಯೋಜನೆ ರೂಪಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಶನಿವಾರ ಹಮ್ಮಿಕೊಂಡಿದ್ದವಿಶ್ವ ಹಿರಿಯ ನಾಗರಿಕರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಸಶಕ್ತರಾಗಿರುವ, ಕ್ರಿಯಾಶೀಲ ನಾಗರಿಕರ ಪಟ್ಟಿ ಸಿದ್ಧಗೊಳಿಸಲಾಗುವುದು. ಸರ್ಕಾರದ ವಿವಿಧ ಹಂತಗಳಲ್ಲಿ ಅವರ ಅನುಭವ, ಸಲಹೆ ಪಡೆದುಕೊಳ್ಳಲಾಗುವುದು. ಇದರಿಂದ ಸರ್ಕಾರದ ಮಟ್ಟದಲ್ಲಿ ಆಗುವ ತಪ್ಪುಗಳು ಪುನರಾವರ್ತನೆಯಾಗದಂತೆ ಎಚ್ಚರ ವಹಿಸಬಹುದು ಎಂದರು.</p>.<p>60 ವರ್ಷ ಮೇಲ್ಪಟ್ಟ ನಾಗರಿಕರ ಆರೋಗ್ಯ ವರ್ಷಕ್ಕೆ ಎರಡು ಬಾರಿ ತಪಾಸಣೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ. ಕಣ್ಣಿನ ತೊಂದರೆ ಇರುವವರಿಗೆ ಸರ್ಕಾರವೇ ಉಚಿತ ಕನ್ನಡಕ ನೀಡಲಿದೆ. ಶ್ರವಣ ಸಾಧನಗಳ ವಿತರಣೆಗಾಗಿಯೇ ₹ 500 ಕೋಟಿ ಮೀಸಲಿಡಲಾಗಿದೆ. ಡಯಾಲಿಸಿಸ್ ಸೇರಿದಂತೆ ಎಲ್ಲ ರೀತಿಯ ಆರೈಕೆಯಲ್ಲೂ ಪ್ರಾಶಸ್ತ್ಯ ನೀಡಲಾಗುತ್ತಿದೆ ಎಂದು ವಿವರ ನೀಡಿದರು.</p>.<p>ಈಚಿನ ದಿನಗಳಲ್ಲಿ ವೃದ್ಧಾಶ್ರಮ ಸಂಸ್ಕೃತಿ ಆರಂಭವಾಗಿರುವುದು ನೋವಿನ ಸಂಗತಿ. ಮಾನವೀಯ ಮೌಲ್ಯಗಳು ಕುಸಿಯುತ್ತಿರುವ ಸಂಕೇತ. ವೃದ್ಧಾಶ್ರಮಗಳಲ್ಲಿ ಆಶ್ರಯ ಪಡೆದವರ ಆರೈಕೆಗೆ ಒತ್ತು ನೀಡಿರುವ ಸರ್ಕಾರ, ಪ್ರತಿ ವೃದ್ಧಾಶ್ರಮಕ್ಕೂ ₹ 12 ಲಕ್ಷ ವಾರ್ಷಿಕ ಅನುದಾನ ನೀಡುತ್ತಿದೆ ಎಂದು ಮಾಹಿತಿ ನೀಡಿದರು.</p>.<p>ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವ ಹಾಲಪ್ಪ ಆಚಾರ್, ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟ 57 ಲಕ್ಷ ನಾಗರಿಕರು ಇದ್ದಾರೆ. ಅವರಲ್ಲಿ 46.80 ಲಕ್ಷ ನಾಗರಿಕರಿಗೆ ಪ್ರತಿ ತಿಂಗಳು ₹ 1,200 ವೇತನ ನೀಡಲಾಗುತ್ತಿದೆ ಎಂದು<br />ಹೇಳಿದರು.</p>.<p>ಸಾಧಕರಾದ ಎಂ.ಎಂ.ಬೋಪಯ್ಯ, ಡಾ.ಬಿ.ಕೆ.ಬಸವರಾಜ ರಾಜಋಷಿ, ವೆಂಕಪ್ಪ ಅಂಬಾಜಿ ಸುಗತೇಕರ, ಡಾ.ಕೆ.ಜಿ.ಕುಲಕರ್ಣಿ, ವಿಜಯಾ ರಮೇಶ್, ಡಾ.ಕೋಡೂರು ವೆಂಕಟೇಶ್ ಹಾಗೂ ಸಾವಿತ್ರಮ್ಮ ರಾಮಶರ್ಮ ಸೇವಾ ಟ್ರಸ್ಟ್ಗೆ ಪ್ರಶಸ್ತಿ ನೀಡಿ, ಗೌರವಿಸಲಾಯಿತು.</p>.<p>ಸಚಿವರಾದ ವಿ.ಸೋಮಣ್ಣ, ಶಂಕರ ಪಾಟೀಲ ಮುನೇನಕೊಪ್ಪ, ಶಾಸಕರಾದ ರವಿ ಸುಬ್ರಹ್ಮಣ್ಯ, ರವಿಕುಮಾರ್, ಉದಯ ಗರುಡಾಚಾರ್, ವಾಗ್ಮಿ ಇಂದುಮತಿ ಸಾಲಿಮಠ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಾರ್ಯದರ್ಶಿ ಎನ್.ಮಂಜುಳಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಹಿರಿಯ ನಾಗರಿಕರ ಪ್ರತಿಭೆ ಸದ್ಬಳಕೆ ಮಾಡಿಕೊಳ್ಳಲು ಹೊಸ ಯೋಜನೆ ರೂಪಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಶನಿವಾರ ಹಮ್ಮಿಕೊಂಡಿದ್ದವಿಶ್ವ ಹಿರಿಯ ನಾಗರಿಕರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಸಶಕ್ತರಾಗಿರುವ, ಕ್ರಿಯಾಶೀಲ ನಾಗರಿಕರ ಪಟ್ಟಿ ಸಿದ್ಧಗೊಳಿಸಲಾಗುವುದು. ಸರ್ಕಾರದ ವಿವಿಧ ಹಂತಗಳಲ್ಲಿ ಅವರ ಅನುಭವ, ಸಲಹೆ ಪಡೆದುಕೊಳ್ಳಲಾಗುವುದು. ಇದರಿಂದ ಸರ್ಕಾರದ ಮಟ್ಟದಲ್ಲಿ ಆಗುವ ತಪ್ಪುಗಳು ಪುನರಾವರ್ತನೆಯಾಗದಂತೆ ಎಚ್ಚರ ವಹಿಸಬಹುದು ಎಂದರು.</p>.<p>60 ವರ್ಷ ಮೇಲ್ಪಟ್ಟ ನಾಗರಿಕರ ಆರೋಗ್ಯ ವರ್ಷಕ್ಕೆ ಎರಡು ಬಾರಿ ತಪಾಸಣೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ. ಕಣ್ಣಿನ ತೊಂದರೆ ಇರುವವರಿಗೆ ಸರ್ಕಾರವೇ ಉಚಿತ ಕನ್ನಡಕ ನೀಡಲಿದೆ. ಶ್ರವಣ ಸಾಧನಗಳ ವಿತರಣೆಗಾಗಿಯೇ ₹ 500 ಕೋಟಿ ಮೀಸಲಿಡಲಾಗಿದೆ. ಡಯಾಲಿಸಿಸ್ ಸೇರಿದಂತೆ ಎಲ್ಲ ರೀತಿಯ ಆರೈಕೆಯಲ್ಲೂ ಪ್ರಾಶಸ್ತ್ಯ ನೀಡಲಾಗುತ್ತಿದೆ ಎಂದು ವಿವರ ನೀಡಿದರು.</p>.<p>ಈಚಿನ ದಿನಗಳಲ್ಲಿ ವೃದ್ಧಾಶ್ರಮ ಸಂಸ್ಕೃತಿ ಆರಂಭವಾಗಿರುವುದು ನೋವಿನ ಸಂಗತಿ. ಮಾನವೀಯ ಮೌಲ್ಯಗಳು ಕುಸಿಯುತ್ತಿರುವ ಸಂಕೇತ. ವೃದ್ಧಾಶ್ರಮಗಳಲ್ಲಿ ಆಶ್ರಯ ಪಡೆದವರ ಆರೈಕೆಗೆ ಒತ್ತು ನೀಡಿರುವ ಸರ್ಕಾರ, ಪ್ರತಿ ವೃದ್ಧಾಶ್ರಮಕ್ಕೂ ₹ 12 ಲಕ್ಷ ವಾರ್ಷಿಕ ಅನುದಾನ ನೀಡುತ್ತಿದೆ ಎಂದು ಮಾಹಿತಿ ನೀಡಿದರು.</p>.<p>ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವ ಹಾಲಪ್ಪ ಆಚಾರ್, ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟ 57 ಲಕ್ಷ ನಾಗರಿಕರು ಇದ್ದಾರೆ. ಅವರಲ್ಲಿ 46.80 ಲಕ್ಷ ನಾಗರಿಕರಿಗೆ ಪ್ರತಿ ತಿಂಗಳು ₹ 1,200 ವೇತನ ನೀಡಲಾಗುತ್ತಿದೆ ಎಂದು<br />ಹೇಳಿದರು.</p>.<p>ಸಾಧಕರಾದ ಎಂ.ಎಂ.ಬೋಪಯ್ಯ, ಡಾ.ಬಿ.ಕೆ.ಬಸವರಾಜ ರಾಜಋಷಿ, ವೆಂಕಪ್ಪ ಅಂಬಾಜಿ ಸುಗತೇಕರ, ಡಾ.ಕೆ.ಜಿ.ಕುಲಕರ್ಣಿ, ವಿಜಯಾ ರಮೇಶ್, ಡಾ.ಕೋಡೂರು ವೆಂಕಟೇಶ್ ಹಾಗೂ ಸಾವಿತ್ರಮ್ಮ ರಾಮಶರ್ಮ ಸೇವಾ ಟ್ರಸ್ಟ್ಗೆ ಪ್ರಶಸ್ತಿ ನೀಡಿ, ಗೌರವಿಸಲಾಯಿತು.</p>.<p>ಸಚಿವರಾದ ವಿ.ಸೋಮಣ್ಣ, ಶಂಕರ ಪಾಟೀಲ ಮುನೇನಕೊಪ್ಪ, ಶಾಸಕರಾದ ರವಿ ಸುಬ್ರಹ್ಮಣ್ಯ, ರವಿಕುಮಾರ್, ಉದಯ ಗರುಡಾಚಾರ್, ವಾಗ್ಮಿ ಇಂದುಮತಿ ಸಾಲಿಮಠ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಾರ್ಯದರ್ಶಿ ಎನ್.ಮಂಜುಳಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>