ಸಾರಿಗೆ ಸಚಿವರಿಗೆ ಪತ್ರ ಬರೆದಿರುವ ಅವರು, ‘ಸಾರಿಗೆ ನಿಗಮಗಳು ವಿದ್ಯಾರ್ಥಿಗಳಿಗೆ ರಿಯಾಯತಿ ಪಾಸುಗಳನ್ನು ಒದಗಿಸಿ ಅನುಕೂಲ ಮಾಡಿಕೊಟ್ಟಿವೆ. ಆದರೆ, ಬಹುತೇಕ ಕಡೆಗಳಲ್ಲಿ ಸರ್ಕಾರಿ ಬಸ್ ಸೌಲಭ್ಯವನ್ನೇ ಅವಲಂಬಿಸಿರುವ ಮಕ್ಕಳು ಶಾಲೆಗಳಿಗೆ ಸರಿಯಾಗಿ ಹಾಜರಾಗುತ್ತಿಲ್ಲವೆಂಬುದು ಇಲಾಖೆಯ ಅಧಿಕಾರಿಗಳ ವರದಿಯಲ್ಲಿ ವ್ಯಕ್ತವಾಗಿದೆ. ಶಾಲಾ ಸಮಯಕ್ಕೆ ಅನುಕೂಲವಾಗುವಂತೆ ಬಸ್ ಸಂಖ್ಯೆ ಹೆಚ್ಚಿಸಬೇಕು’ ಎಂದು ಮನವಿ ಮಾಡಿದ್ದಾರೆ.