ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಸೆಂಬರ್‌ ಅಂತ್ಯದವರೆಗೆ ಶಾಲೆ-ಪದವಿಪೂರ್ವ ಕಾಲೇಜು ತೆರೆಯಲ್ಲ: ಬಿ.ಎಸ್.ಯಡಿಯೂರಪ್ಪ

Last Updated 23 ನವೆಂಬರ್ 2020, 8:16 IST
ಅಕ್ಷರ ಗಾತ್ರ

ಬೆಂಗಳೂರು: ‘ಡಿಸೆಂಬರ್‌ ಅಂತ್ಯದವರೆಗೆ ಶಾಲೆ– ಪದವಿಪೂರ್ವ ಕಾಲೇಜುಗಳನ್ನು ಆರಂಭಿಸುವುದಿಲ್ಲ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಶಾಲೆ ಆರಂಭಿಸುವ ಕುರಿತು ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳ ಮುಖ್ಯಸ್ಥರ ಜೊತೆ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ‘ಸಭೆಯಲ್ಲಿ ಶಿಕ್ಷಣ ತಜ್ಞರು, ಶಿಕ್ಷಣ ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳ ಅಭಿಪ್ರಾಯದ ಬಗ್ಗೆ ಚರ್ಚೆ ನಡೆಯಿತು’ ಎಂದರು.

‘ಡಿಸೆಂಬರ್‌ ಕೊನೆಯಲ್ಲಿ ಮತ್ತೊಮ್ಮೆ ಸಭೆ ಸೇರಿ ಚರ್ಚೆ ನಡೆಸಲು ನಿರ್ಧರಿಸಲಾಗಿದೆ. ಯಾವುದೇ ಸನ್ನಿವೇಶದಲ್ಲಿ ಕೋವಿಡ್‌ ಜಾಸ್ತಿ ಆಗಬಹುದು ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಶಾಲೆಗಳನ್ನು ಆರಂಭಿಸಿದರೆ ಮಕ್ಕಳಿಗೆ ತೊಂದರೆ ಆಗಬಬಹುದು. ಹೀಗಾಗಿ, ಒಮ್ಮತದಿಂದ ಈ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT