<p><strong>ಬೆಂಗಳೂರು: </strong>ಕೋವಿಡ್ ಬಿಕ್ಕಟ್ಟಿನ ಕಾರಣ ಈ ಶೈಕ್ಷಣಿಕ ವರ್ಷಕ್ಕೆ ಸೀಮಿತಗೊಳಿಸಿ ಶಾಲಾ–ಕಾಲೇಜು ನೋಂದಣಿ ನವೀಕರಣಕ್ಕೆ ರಾಜ್ಯ ಸರ್ಕಾರ ವಿಶೇಷ ವಿನಾಯಿತಿ ನೀಡಿದೆ.</p>.<p>‘2017-18ನೇ ಸಾಲಿಗೆ ಪೂರ್ವದಿಂದಲೂ ಅಸ್ತಿತ್ವದಲ್ಲಿರುವ ಅನುದಾನಿತ ಹಾಗೂ ಅನುದಾನ ರಹಿತ ಶಾಲೆ-ಪದವಿ ಪೂರ್ವ ಕಾಲೇಜುಗಳು ದಾಖಲೆಗಳನ್ನು ಸಲ್ಲಿಸಲು ಈ ವರ್ಷ ವಿನಾಯಿತಿ ನೀಡಲಾಗಿದೆ. ಕಳೆದ ಶೈಕ್ಷಣಿಕ ಸಾಲಿನ ದಾಖಲೆಗಳ ಆಧಾರದಲ್ಲಿ ನೋಂದಣಿ, ನವೀಕರಣ ನೀಡಲು ನಿರ್ಧರಿಸಲಾಗಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.</p>.<p>‘ನವೀಕರಣದ ನೆಪದಲ್ಲಿಆರ್.ಟಿ.ಇ. ಹಣ ಮರುಪಾವತಿ ವಿಳಂಬ ಸೇರಿದಂತೆ ಅನವಶ್ಯಕ ಸಮಸ್ಯೆಗಳಿಗೆ ಕಾರಣವಾಗದಂತೆ ಕ್ರಮ ವಹಿಸಬೇಕು’ ಎಂದು ಇಲಾಖೆಯ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದ್ದಾರೆ.</p>.<p>ಹೆಚ್ಚುವರಿ ವಿಭಾಗ, ವಿಷಯ, ಭಾಷೆ ಮತ್ತು ಸಂಯೋಜನೆಗಳನ್ನು ಅನುಮತಿ ನೀಡುವ ಹಾಗೂ ನವೀಕರಿಸುವ ಸಂದರ್ಭದಲ್ಲಿ ಅಗ್ನಿ ಸುರಕ್ಷತಾ ಪ್ರಮಾಣ ಪತ್ರ, ಕಟ್ಟಡ ಸುರಕ್ಷತಾ ಪ್ರಮಾಣ ಪತ್ರಗಳನ್ನು ಸಲ್ಲಿಸಬೇಕಾಗುತ್ತದೆ.</p>.<p>‘ಸುಪ್ರೀಂ ಕೋರ್ಟ್ನ ತೀರ್ಪಿನ ಅನ್ವಯ ವಿದ್ಯಾರ್ಥಿಗಳ ಸುರಕ್ಷತೆ, ಶಾಲಾ ಸುರಕ್ಷತೆ ನಿಯಮಗಳ ರಚನೆಗೆ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಈ ಸಮಿತಿಯು ಒಂದು ತಿಂಗಳಲ್ಲಿ ಶಾಲಾ ಸುರಕ್ಷತಾ ಕ್ರಮಗಳನ್ನು, ಇಲಾಖೆಯ ಇಲ್ಲಿಯವರೆಗಿನ ಆದೇಶಗಳು, ನ್ಯಾಯಾಲಯಗಳ ತೀರ್ಪುಗಳನ್ನು ಸಮಗ್ರವಾಗಿ ಪರಿಶೀಲಿಸಿ ವರದಿ ನೀಡಲಿದೆ’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೋವಿಡ್ ಬಿಕ್ಕಟ್ಟಿನ ಕಾರಣ ಈ ಶೈಕ್ಷಣಿಕ ವರ್ಷಕ್ಕೆ ಸೀಮಿತಗೊಳಿಸಿ ಶಾಲಾ–ಕಾಲೇಜು ನೋಂದಣಿ ನವೀಕರಣಕ್ಕೆ ರಾಜ್ಯ ಸರ್ಕಾರ ವಿಶೇಷ ವಿನಾಯಿತಿ ನೀಡಿದೆ.</p>.<p>‘2017-18ನೇ ಸಾಲಿಗೆ ಪೂರ್ವದಿಂದಲೂ ಅಸ್ತಿತ್ವದಲ್ಲಿರುವ ಅನುದಾನಿತ ಹಾಗೂ ಅನುದಾನ ರಹಿತ ಶಾಲೆ-ಪದವಿ ಪೂರ್ವ ಕಾಲೇಜುಗಳು ದಾಖಲೆಗಳನ್ನು ಸಲ್ಲಿಸಲು ಈ ವರ್ಷ ವಿನಾಯಿತಿ ನೀಡಲಾಗಿದೆ. ಕಳೆದ ಶೈಕ್ಷಣಿಕ ಸಾಲಿನ ದಾಖಲೆಗಳ ಆಧಾರದಲ್ಲಿ ನೋಂದಣಿ, ನವೀಕರಣ ನೀಡಲು ನಿರ್ಧರಿಸಲಾಗಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.</p>.<p>‘ನವೀಕರಣದ ನೆಪದಲ್ಲಿಆರ್.ಟಿ.ಇ. ಹಣ ಮರುಪಾವತಿ ವಿಳಂಬ ಸೇರಿದಂತೆ ಅನವಶ್ಯಕ ಸಮಸ್ಯೆಗಳಿಗೆ ಕಾರಣವಾಗದಂತೆ ಕ್ರಮ ವಹಿಸಬೇಕು’ ಎಂದು ಇಲಾಖೆಯ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದ್ದಾರೆ.</p>.<p>ಹೆಚ್ಚುವರಿ ವಿಭಾಗ, ವಿಷಯ, ಭಾಷೆ ಮತ್ತು ಸಂಯೋಜನೆಗಳನ್ನು ಅನುಮತಿ ನೀಡುವ ಹಾಗೂ ನವೀಕರಿಸುವ ಸಂದರ್ಭದಲ್ಲಿ ಅಗ್ನಿ ಸುರಕ್ಷತಾ ಪ್ರಮಾಣ ಪತ್ರ, ಕಟ್ಟಡ ಸುರಕ್ಷತಾ ಪ್ರಮಾಣ ಪತ್ರಗಳನ್ನು ಸಲ್ಲಿಸಬೇಕಾಗುತ್ತದೆ.</p>.<p>‘ಸುಪ್ರೀಂ ಕೋರ್ಟ್ನ ತೀರ್ಪಿನ ಅನ್ವಯ ವಿದ್ಯಾರ್ಥಿಗಳ ಸುರಕ್ಷತೆ, ಶಾಲಾ ಸುರಕ್ಷತೆ ನಿಯಮಗಳ ರಚನೆಗೆ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಈ ಸಮಿತಿಯು ಒಂದು ತಿಂಗಳಲ್ಲಿ ಶಾಲಾ ಸುರಕ್ಷತಾ ಕ್ರಮಗಳನ್ನು, ಇಲಾಖೆಯ ಇಲ್ಲಿಯವರೆಗಿನ ಆದೇಶಗಳು, ನ್ಯಾಯಾಲಯಗಳ ತೀರ್ಪುಗಳನ್ನು ಸಮಗ್ರವಾಗಿ ಪರಿಶೀಲಿಸಿ ವರದಿ ನೀಡಲಿದೆ’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>