‘ಕೊರೊನಾ ಸಂಪೂರ್ಣವಾಗಿ ಹೋಗುವತನಕ ಶಾಲಾ, ಕಾಲೇಜುಗಳನ್ನು ಪ್ರಾರಂಭಿಸಬಾರದು. ಶಿಕ್ಷಕರಿಗೆ ದಸರಾ ರಜೆ ರದ್ದು ಮಾಡಿದ್ದು ಸರಿಯಾದ ಕ್ರಮವಲ್ಲ.ಈಗಿನ ಪರಿಸ್ಥಿತಿಯಲ್ಲಿ ಶಿಕ್ಷಕರು ಮತ್ತು ಮಕ್ಕಳಿಗೆ ಸಾಧ್ಯವಾದಷ್ಟು ತಮ್ಮ ಮನೆಗಳಲ್ಲಿಯೇ ಇರಲು ಬಿಡಬೇಕು. ಇಷ್ಟೆಲ್ಲ ಹೇಳಿದ ಮೇಲೂ ಶಾಲೆ ಆರಂಭಿಸಿ ಸರ್ಕಾರ ತನ್ನ ಪ್ರತಿಷ್ಠೆ ಮುಂದುವರಿಸಿದರೆ ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ’ ಎಂದು ಎಚ್ಚರಿಸಿದ್ದಾರೆ.