ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಳೇ ವಾಹನಗಳನ್ನು ಗುಜರಿಗೆ ಹಾಕಲು ಕ್ರಮ -ಹರ್ಷವರ್ಧನ್

Last Updated 23 ಡಿಸೆಂಬರ್ 2022, 21:45 IST
ಅಕ್ಷರ ಗಾತ್ರ

ಬೆಳಗಾವಿ: ಸರ್ಕಾರಿ ಕಚೇರಿಗಳ ಮುಂದೆ 10 ವರ್ಷಕ್ಕೂ ಹೆಚ್ಚು ಅವಧಿಯಿಂದ ನಿಂತಿರುವ ವಾಹನಗಳು ತುಕ್ಕು ಹಿಡಿಯುತ್ತಿದ್ದು, ಅವುಗಳನ್ನು ವಿಲೇವಾರಿ ಮಾಡಿ ಅಥವಾ ಗುಜರಿಗೆ ಹಾಕಿ ಎಂದು ಬಿಜೆಪಿಯ ಹರ್ಷವರ್ಧನ್ ಅವರು ಒತ್ತಾಯಿಸಿದರು.

ವಿಧಾನಸಭೆಯಲ್ಲಿ ಶೂನ್ಯವೇಳೆಯಲ್ಲಿ ಮಾತನಾಡಿದ ಅವರು, ‘3 –4 ಲಕ್ಷ ಕಿ.ಮೀ ಓಡಿದ ವಾಹನಗಳನ್ನೂ ರಿಪೇರಿ ಮಾಡಿ ಓಡಿಸುತ್ತಿದಾರೆ. ಇವುಗಳಿಂದ ಅಪಘಾತವೂ ಆಗಬಹುದು’ ಎಂದು ಆತಂಕ ವ್ಯಕ್ತಪಡಿಸಿದರು.

ಇದಕ್ಕೆ ಧ್ವನಿಗೂಡಿಸಿದ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ‘ಸರ್ಕಾರಿ ಕಚೇರಿಗಳು, ಶಾಸಕರ ಭವನ ಸೇರಿ ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಸರ್ಕಾರಿ ವಾಹನಗಳು ನಿಂತಿವೆ. ಇವು ತುಕ್ಕು ಹಿಡಿದಿವೆ. ಇದಕ್ಕೆ ಮುಕ್ತಿ ಕಾಣಿಸಬೇಕು’ ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಜೆ.ಸಿ.ಮಾಧುಸ್ವಾಮಿ, ‘ಸ್ಕ್ರ್ಯಾಪ್‌ಗೆ ಹಾಕಲು ವ್ಯವಸ್ಥೆ ಮಾಡಲಾಗವುದು. ಆದರೆ, ಪೊಲೀಸ್‌ ಠಾಣೆ ಬಳಿ ಇರುವ ವಾಹನಗಳನ್ನು ಹರಾಜು ಹಾಕಲು ಸಾಧ್ಯವಿಲ್ಲ. ಇದಕ್ಕೆ ನ್ಯಾಯಾಲಯದ ಒಪ್ಪಿಗೆ ಬೇಕು. ನಿಂತಲ್ಲೇ ಕೆಲವರು ಬಿಡಿ ಭಾಗಗಳನ್ನು ಬಿಚ್ಚಿಕೊಂಡು ಹೋಗುತ್ತಾರೆ’ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT