<p><strong>ಬೆಂಗಳೂರು:</strong> 2021–22ನೇ ಸಾಲಿನ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಯೋಜನೆಯಡಿ ₹26,005 ಕೋಟಿ ಅನುದಾನ ಹಂಚಿಕೆ ಮಾಡಿದ್ದು, ಇದಕ್ಕೆ ಶೀಘ್ರವೇ ಕರಡು ಕ್ರಿಯಾ ಯೋಜನೆ ರೂಪಿಸುವಂತೆ ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<p>ಈ ಸಂಬಂಧ ವಿಕಾಸಸೌಧದಲ್ಲಿ ಎರಡು ದಿನಗಳ ಅವಧಿಯ ವರ್ಚುವಲ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಖ್ಯಮಂತ್ರಿಯವರು ಶೀಘ್ರವೇ ರಾಜ್ಯ ಪರಿಷತ್ ಸಭೆ ಕರೆಯಲಿದ್ದಾರೆ. ಅದಕ್ಕೆ ಮೊದಲೇ ಕ್ರಿಯಾ ಯೋಜನೆ ತಯಾರಿಸಬೇಕು ಎಂದು 35 ಇಲಾಖೆಗಳ ನೋಡಲ್ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಎಲ್ಲ ಇಲಾಖೆಗಳ ಕ್ರೋಡೀಕೃತ ಕರಡು ಕ್ರಿಯಾ ಯೋಜನೆಯನ್ನು ಶೀಘ್ರವಾಗಿ ಸಲ್ಲಿಸಬೇಕು. ಈ ಕರಡು ಕ್ರಿಯಾ ಯೋಜನೆಯನ್ನು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ರಾಜ್ಯ ಪರಿಷತ್ ಸಭೆಯಲ್ಲಿ ಮಂಡಿಸಿ ಅಂತಿಮ ಅನುಮೋದನೆ ಪಡೆಯಲಾಗುವುದು ಎಂದರು.</p>.<p>ಕಳೆದ ಸಾಲಿನಲ್ಲಿ ಈ ಯೋಜನೆಗೆ ₹25,916 ಕೋಟಿ ಹಂಚಿಕೆ ಆಗಿತ್ತು. ಅದರಲ್ಲಿ ₹24,568 ಕೋಟಿಯನ್ನು (ಶೇ 95) ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದ ಕಲ್ಯಾಣಕ್ಕಾಗಿ ಖರ್ಚು ಮಾಡಲಾಗಿದೆ ಎಂದು ಶ್ರೀರಾಮುಲು ಹೇಳಿದರು.</p>.<p>ಪರಿಶಿಷ್ಟ ಜಾತಿ ಮತ್ತು ವರ್ಗಗಳ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಸರ್ಕಾರ ಹಮ್ಮಿಕೊಂಡಿದ್ದು, ಅತ್ಯಂತ ತಳಮಟ್ಟದವರೆಗೆ ಈ ಯೋಜನೆಯನ್ನು ತಲುಪಿಸಲಾಗುವುದು. ಈ ಯೋಜನೆಗಳನ್ನು ಸಮುದಾಯವು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಅಭಿವೃದ್ಧಿ ಹೊಂದಬೇಕು ಎಂದೂ ಮನವಿ ಮಾಡಿದರು.</p>.<p>ಸಭೆಯಲ್ಲಿ ಸಮಾಜಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾದ ಎನ್.ನಾಗಾಂಬಿಕಾ ದೇವಿ, ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಯೋಜನೆಯ ಸಲಹೆಗಾರ ವೆಂಕಟಯ್ಯ, ನೀರಾವರಿ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ರಾಕೇಶ್ ಸಿಂಗ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ರವಿಕುಮಾರ್ ಸುರಪುರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> 2021–22ನೇ ಸಾಲಿನ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಯೋಜನೆಯಡಿ ₹26,005 ಕೋಟಿ ಅನುದಾನ ಹಂಚಿಕೆ ಮಾಡಿದ್ದು, ಇದಕ್ಕೆ ಶೀಘ್ರವೇ ಕರಡು ಕ್ರಿಯಾ ಯೋಜನೆ ರೂಪಿಸುವಂತೆ ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<p>ಈ ಸಂಬಂಧ ವಿಕಾಸಸೌಧದಲ್ಲಿ ಎರಡು ದಿನಗಳ ಅವಧಿಯ ವರ್ಚುವಲ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಖ್ಯಮಂತ್ರಿಯವರು ಶೀಘ್ರವೇ ರಾಜ್ಯ ಪರಿಷತ್ ಸಭೆ ಕರೆಯಲಿದ್ದಾರೆ. ಅದಕ್ಕೆ ಮೊದಲೇ ಕ್ರಿಯಾ ಯೋಜನೆ ತಯಾರಿಸಬೇಕು ಎಂದು 35 ಇಲಾಖೆಗಳ ನೋಡಲ್ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಎಲ್ಲ ಇಲಾಖೆಗಳ ಕ್ರೋಡೀಕೃತ ಕರಡು ಕ್ರಿಯಾ ಯೋಜನೆಯನ್ನು ಶೀಘ್ರವಾಗಿ ಸಲ್ಲಿಸಬೇಕು. ಈ ಕರಡು ಕ್ರಿಯಾ ಯೋಜನೆಯನ್ನು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ರಾಜ್ಯ ಪರಿಷತ್ ಸಭೆಯಲ್ಲಿ ಮಂಡಿಸಿ ಅಂತಿಮ ಅನುಮೋದನೆ ಪಡೆಯಲಾಗುವುದು ಎಂದರು.</p>.<p>ಕಳೆದ ಸಾಲಿನಲ್ಲಿ ಈ ಯೋಜನೆಗೆ ₹25,916 ಕೋಟಿ ಹಂಚಿಕೆ ಆಗಿತ್ತು. ಅದರಲ್ಲಿ ₹24,568 ಕೋಟಿಯನ್ನು (ಶೇ 95) ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದ ಕಲ್ಯಾಣಕ್ಕಾಗಿ ಖರ್ಚು ಮಾಡಲಾಗಿದೆ ಎಂದು ಶ್ರೀರಾಮುಲು ಹೇಳಿದರು.</p>.<p>ಪರಿಶಿಷ್ಟ ಜಾತಿ ಮತ್ತು ವರ್ಗಗಳ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಸರ್ಕಾರ ಹಮ್ಮಿಕೊಂಡಿದ್ದು, ಅತ್ಯಂತ ತಳಮಟ್ಟದವರೆಗೆ ಈ ಯೋಜನೆಯನ್ನು ತಲುಪಿಸಲಾಗುವುದು. ಈ ಯೋಜನೆಗಳನ್ನು ಸಮುದಾಯವು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಅಭಿವೃದ್ಧಿ ಹೊಂದಬೇಕು ಎಂದೂ ಮನವಿ ಮಾಡಿದರು.</p>.<p>ಸಭೆಯಲ್ಲಿ ಸಮಾಜಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾದ ಎನ್.ನಾಗಾಂಬಿಕಾ ದೇವಿ, ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಯೋಜನೆಯ ಸಲಹೆಗಾರ ವೆಂಕಟಯ್ಯ, ನೀರಾವರಿ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ರಾಕೇಶ್ ಸಿಂಗ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ರವಿಕುಮಾರ್ ಸುರಪುರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>