ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ 13 ವರ್ಷದ ಬಾಲಕನಲ್ಲಿ ಈ ರೋಗ ಕಾಣಿಸಿಕೊಂಡಿದೆ. 8 ದಿನಗಳ ಹಿಂದೆ ಎಸ್.ಎಸ್. ಹೈಟೆಕ್ ಆಸ್ಪತ್ರೆಗೆ ಈ ಮಗುವನ್ನು ದಾಖಲಿಸಲಾಗಿತ್ತು. ಮಗುವನ್ನು ಪರೀಕ್ಷೆ ಮಾಡಿದಾಗ ಮಿದುಳು ನಿಷ್ಕ್ರಿಯ ಹಂತದಲ್ಲಿತ್ತು. ವೆಂಟಲೇಟರ್ನಲ್ಲಿ ಮೂರು ದಿನ ಚಿಕಿತ್ಸೆ ಕೊಡಲಾಯಿತು. ಸ್ವಲ್ಪ ಚೇತರಿಕೆ ಕಂಡಿದ್ದು, ಐಸಿಯುನಲ್ಲಿ ಇಡಲಾಗಿದೆ. ಆಮ್ಲಜನಕ ನೀಡುವುದನ್ನು ಕೂಡ ನಿಲ್ಲಿಸಲಾಗಿದೆ ಎಂದು ಎಸ್.ಎಸ್. ಹೈಟೆಕ್ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರೂ ಆಗಿರುವಮಕ್ಕಳ ತಜ್ಞ ಡಾ.ಎನ್.ಕೆ. ಕಾಳಪ್ಪನವರ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.