ಈ ಕುರಿತು ವಿಧಾನಸಭೆ ಅಧ್ಯಕ್ಷರಿಗೆ ಪತ್ರ ಬರೆದಿರುವ ಸಂಘದ ಅಧ್ಯಕ್ಷ ಗುರುಸ್ವಾಮಿ, ‘ಬೆಳಗಾವಿಯು ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಗಡಿಯಲ್ಲಿದೆ. ಅಲ್ಲಿಗೆ ವಿದೇಶಿ ಪ್ರಯಾಣಿಕರು ಮತ್ತು ಅಂತರ್ ರಾಜ್ಯ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಅಂತಹ ಸ್ಥಳದಲ್ಲಿ ಶಾಸಕರು, ಸರ್ಕಾರಿ ಅಧಿಕಾರಿಗಳು, ನೌಕರರು ಬೃಹತ್ ಸಂಖ್ಯೆಯಲ್ಲಿ ಒಂದೇ ಕಡೆಯಲ್ಲಿ ಸೇರುವುದು ಓಮೈಕ್ರಾನ್ ವೈರಾಣು ಸೋಂಕು ಹರಡಲು ಕಾರಣವಾಗಬಹುದು. ಆದ್ದರಿಂದ ಮತ್ತೊಮ್ಮೆ ಪರಿಶೀಲಿಸಿ, ಡಿಸೆಂಬರ್ 13ರಿಂದ ಆರಂಭವಾಗಬೇಕಿರುವ ಅಧಿವೇಶನವನ್ನು ರದ್ದುಗೊಳಿಸಬೇಕು’ ಎಂದು ಒತ್ತಾಯಿಸಿದ್ದಾರೆ.