<p><strong>ಹೊಸದುರ್ಗ: </strong>ಹನ್ನೆರಡನೇ ಶತಮಾನದ ಬಸವಾದಿ ಶಿವಶರಣರು ಜಾತ್ಯತೀತ ಸಮಾಜ ನಿರ್ಮಿಸಲು ಶ್ರಮಿಸಿದ್ದರು. ಆದರೆ, ಇಂದು ಎಲ್ಲಾ ರಂಗದಲ್ಲಿ ಜಾತಿ ವ್ಯವಸ್ಥೆ ಪ್ರಬಲವಾಗುತ್ತಿದೆ. ಜಾತಿಯನ್ನು ಮುಂದಿಟ್ಟುಕೊಂಡು ರಾಜಕಾರಣಿಗಳಿಂದ ಅನುದಾನ ಕೇಳುವ ಮಠಾಧೀಶರು ಭ್ರಷ್ಟರಾಗು ತ್ತಿದ್ದಾರೆ ಎಂದು ಕುಂಚಿಟಿಗ ಮಹಾಸಂಸ್ಥಾನದ ಶಾಂತವೀರ ಸ್ವಾಮೀಜಿ ಅಭಿಪ್ರಾಯಪಟ್ಟರು.</p>.<p>ಬೆಂಗಳೂರು ನಗರ ಜಿಲ್ಲೆ ಹಾಗೂ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ಭಾನುವಾರ ಪಟ್ಟಣದಲ್ಲಿ ಆಯೋಜಿಸಿದ್ದ ‘ಕನ್ನಡ ಸೇವಾರತ್ನ’ ಪ್ರಶಸ್ತಿ ಪ್ರದಾನ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>‘ಸಮಾಜದಲ್ಲಿ ಜಾತಿ ವ್ಯವಸ್ಥೆ, ಅನಾಚಾರ ಹೆಚ್ಚಾಗುತ್ತಿದೆ. ಕೆಲವು ರಾಜಕಾರಣಿಗಳು ಜಾತಿ ಇಟ್ಟುಕೊಂಡು ಬಲಾಢ್ಯರಾಗುತ್ತಿದ್ದಾರೆ. ಮೀಸಲಾತಿ ಎಲ್ಲಾ ವರ್ಗದವರಿಗೂ ಬೇಕಾಗಿದೆ. ಕೇವಲ ಬಲಾಢ್ಯ ಜಾತಿಗಳು ಮೀಸಲಾತಿ ಪಡೆದುಕೊಂಡರೆ ಸಣ್ಣಪುಟ್ಟ ತಳಸಮುದಾಯದವರು ಏನಾಗಬೇಕು’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸದುರ್ಗ: </strong>ಹನ್ನೆರಡನೇ ಶತಮಾನದ ಬಸವಾದಿ ಶಿವಶರಣರು ಜಾತ್ಯತೀತ ಸಮಾಜ ನಿರ್ಮಿಸಲು ಶ್ರಮಿಸಿದ್ದರು. ಆದರೆ, ಇಂದು ಎಲ್ಲಾ ರಂಗದಲ್ಲಿ ಜಾತಿ ವ್ಯವಸ್ಥೆ ಪ್ರಬಲವಾಗುತ್ತಿದೆ. ಜಾತಿಯನ್ನು ಮುಂದಿಟ್ಟುಕೊಂಡು ರಾಜಕಾರಣಿಗಳಿಂದ ಅನುದಾನ ಕೇಳುವ ಮಠಾಧೀಶರು ಭ್ರಷ್ಟರಾಗು ತ್ತಿದ್ದಾರೆ ಎಂದು ಕುಂಚಿಟಿಗ ಮಹಾಸಂಸ್ಥಾನದ ಶಾಂತವೀರ ಸ್ವಾಮೀಜಿ ಅಭಿಪ್ರಾಯಪಟ್ಟರು.</p>.<p>ಬೆಂಗಳೂರು ನಗರ ಜಿಲ್ಲೆ ಹಾಗೂ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ಭಾನುವಾರ ಪಟ್ಟಣದಲ್ಲಿ ಆಯೋಜಿಸಿದ್ದ ‘ಕನ್ನಡ ಸೇವಾರತ್ನ’ ಪ್ರಶಸ್ತಿ ಪ್ರದಾನ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>‘ಸಮಾಜದಲ್ಲಿ ಜಾತಿ ವ್ಯವಸ್ಥೆ, ಅನಾಚಾರ ಹೆಚ್ಚಾಗುತ್ತಿದೆ. ಕೆಲವು ರಾಜಕಾರಣಿಗಳು ಜಾತಿ ಇಟ್ಟುಕೊಂಡು ಬಲಾಢ್ಯರಾಗುತ್ತಿದ್ದಾರೆ. ಮೀಸಲಾತಿ ಎಲ್ಲಾ ವರ್ಗದವರಿಗೂ ಬೇಕಾಗಿದೆ. ಕೇವಲ ಬಲಾಢ್ಯ ಜಾತಿಗಳು ಮೀಸಲಾತಿ ಪಡೆದುಕೊಂಡರೆ ಸಣ್ಣಪುಟ್ಟ ತಳಸಮುದಾಯದವರು ಏನಾಗಬೇಕು’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>