ಹೊಸದುರ್ಗ: ಹನ್ನೆರಡನೇ ಶತಮಾನದ ಬಸವಾದಿ ಶಿವಶರಣರು ಜಾತ್ಯತೀತ ಸಮಾಜ ನಿರ್ಮಿಸಲು ಶ್ರಮಿಸಿದ್ದರು. ಆದರೆ, ಇಂದು ಎಲ್ಲಾ ರಂಗದಲ್ಲಿ ಜಾತಿ ವ್ಯವಸ್ಥೆ ಪ್ರಬಲವಾಗುತ್ತಿದೆ. ಜಾತಿಯನ್ನು ಮುಂದಿಟ್ಟುಕೊಂಡು ರಾಜಕಾರಣಿಗಳಿಂದ ಅನುದಾನ ಕೇಳುವ ಮಠಾಧೀಶರು ಭ್ರಷ್ಟರಾಗು ತ್ತಿದ್ದಾರೆ ಎಂದು ಕುಂಚಿಟಿಗ ಮಹಾಸಂಸ್ಥಾನದ ಶಾಂತವೀರ ಸ್ವಾಮೀಜಿ ಅಭಿಪ್ರಾಯಪಟ್ಟರು.