<p><strong>ನವದೆಹಲಿ:</strong> ನೂತನ ಮುಖ್ಯಮಂತ್ರಿ ಆಯ್ಕೆ ಹಿನ್ನೆಲೆಯಲ್ಲಿ ಸಂಜೆ ಬೆಂಗಳೂರಿನ ರಾಜಭವನ ರಸ್ತೆಯ ಕ್ಯಾಪಿಟಲ್ ಹೋಟೆಲ್ನಲ್ಲಿ ಕರ್ನಾಟಕದ ಶಾಸಕರ ಸಭೆ ಆಯೋಜಿಸಲಾಗುವುದು ಎಂದು ಕೇಂದ್ರ ಸಚಿವ ಜಿ.ಕಿಷನ್ ರೆಡ್ಡಿ ತಿಳಿಸಿದ್ದಾರೆ.</p>.<p>ಕೇಂದ್ರದ ಇನ್ನೊಬ್ಬ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಅರುಣ್ ಸಿಂಗ್ ಬದಲಿಗೆ ವೀಕ್ಷಕರಾಗಿ ತೆರಳುತ್ತಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದ್ದಾರೆ.</p>.<p>'ಸಂಜೆ 5 ಗಂಟೆಯ ವೇಳೆಗೆ ಪ್ರಧಾನ್ ಜೊತೆ ಬೆಂಗಳೂರು ತಲುಪಲಿದ್ದೇನೆ ಎಂದ ಅವರು, 7ಕ್ಕೆ ಹೋಟೆಲ್ ಕ್ಯಾಪೊಟಲ್ ನಲ್ಲಿ ಶಾಸಕಾಂಗ ಪಕ್ಷದ ಸಭೆ ಆಯೋಜಿಸಲಾಗುವುದು' ಎಂದು ಹೇಳಿದ್ದಾರೆ.</p>.<p>ಶಾಸಕರು ಮಾತ್ರವಲ್ಲದೆ ಪಕ್ಷದ ರಾಜ್ಯ ಮುಖಂಡರು ಹಾಗೂ ಹಂಗಾಮಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಆರ್ ಎಸ್ ಎಸ್ ಮುಖಂಡರನ್ನು ಭೇಟಿ ಮಾಡಿ ಚರ್ಚಿಸುವ ಸಾಧ್ಯತೆ ಇದೆ.</p>.<p>ಈ ಮೊದಲು ಪಕ್ಷದ ವರಿಷ್ಠರು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ವೀಕ್ಷಕರನ್ನಾಗಿ ಕಳುಹಿಸಲು ನಿರ್ಧರಿಸಿದ್ದರು. ಆದರೆ, ಕೊನೆಯ ಕ್ಷಣದಲ್ಲಿ ಕಿಷನ್ ರೆಡ್ಡಿ ಅವರನ್ನು ವೀಕ್ಷಕರನ್ನಾಗಿ ನೇಮಿಸಿದರು.</p>.<p>ಧರ್ಮೇಂದ್ರ ಪ್ರಧಾನ್ ಈ ಹಿಂದೆ ಪಕ್ಷದ ರಾಜ್ಯ ಉಸ್ತುವಾರಿಯಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದರೆ, ಕಿಷನ್ ರೆಡ್ಡಿ ಕರ್ನಾಟಕದ ನೆರೆಯ ತೆಲಂಗಾಣ ರಾಜ್ಯದವರು.</p>.<p>ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರೂ ಸಭೆಗಳಲ್ಲಿ ಪಾಲ್ಗೊಳ್ಳಲು ಈಗಾಗಲೇ ಬೆಂಗಳೂರಿನತ್ತ ತೆರಳಿದ್ದಾರೆ.</p>.<p><a href="https://www.prajavani.net/district/chamarajanagara/bs-yediyurappa-resignation-his-follower-from-gundlupete-committed-suicide-852119.html" itemprop="url">ಗುಂಡ್ಲುಪೇಟೆ: ಯಡಿಯೂರಪ್ಪ ಅಭಿಮಾನಿ ಆತ್ಮಹತ್ಯೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ನೂತನ ಮುಖ್ಯಮಂತ್ರಿ ಆಯ್ಕೆ ಹಿನ್ನೆಲೆಯಲ್ಲಿ ಸಂಜೆ ಬೆಂಗಳೂರಿನ ರಾಜಭವನ ರಸ್ತೆಯ ಕ್ಯಾಪಿಟಲ್ ಹೋಟೆಲ್ನಲ್ಲಿ ಕರ್ನಾಟಕದ ಶಾಸಕರ ಸಭೆ ಆಯೋಜಿಸಲಾಗುವುದು ಎಂದು ಕೇಂದ್ರ ಸಚಿವ ಜಿ.ಕಿಷನ್ ರೆಡ್ಡಿ ತಿಳಿಸಿದ್ದಾರೆ.</p>.<p>ಕೇಂದ್ರದ ಇನ್ನೊಬ್ಬ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಅರುಣ್ ಸಿಂಗ್ ಬದಲಿಗೆ ವೀಕ್ಷಕರಾಗಿ ತೆರಳುತ್ತಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದ್ದಾರೆ.</p>.<p>'ಸಂಜೆ 5 ಗಂಟೆಯ ವೇಳೆಗೆ ಪ್ರಧಾನ್ ಜೊತೆ ಬೆಂಗಳೂರು ತಲುಪಲಿದ್ದೇನೆ ಎಂದ ಅವರು, 7ಕ್ಕೆ ಹೋಟೆಲ್ ಕ್ಯಾಪೊಟಲ್ ನಲ್ಲಿ ಶಾಸಕಾಂಗ ಪಕ್ಷದ ಸಭೆ ಆಯೋಜಿಸಲಾಗುವುದು' ಎಂದು ಹೇಳಿದ್ದಾರೆ.</p>.<p>ಶಾಸಕರು ಮಾತ್ರವಲ್ಲದೆ ಪಕ್ಷದ ರಾಜ್ಯ ಮುಖಂಡರು ಹಾಗೂ ಹಂಗಾಮಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಆರ್ ಎಸ್ ಎಸ್ ಮುಖಂಡರನ್ನು ಭೇಟಿ ಮಾಡಿ ಚರ್ಚಿಸುವ ಸಾಧ್ಯತೆ ಇದೆ.</p>.<p>ಈ ಮೊದಲು ಪಕ್ಷದ ವರಿಷ್ಠರು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ವೀಕ್ಷಕರನ್ನಾಗಿ ಕಳುಹಿಸಲು ನಿರ್ಧರಿಸಿದ್ದರು. ಆದರೆ, ಕೊನೆಯ ಕ್ಷಣದಲ್ಲಿ ಕಿಷನ್ ರೆಡ್ಡಿ ಅವರನ್ನು ವೀಕ್ಷಕರನ್ನಾಗಿ ನೇಮಿಸಿದರು.</p>.<p>ಧರ್ಮೇಂದ್ರ ಪ್ರಧಾನ್ ಈ ಹಿಂದೆ ಪಕ್ಷದ ರಾಜ್ಯ ಉಸ್ತುವಾರಿಯಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದರೆ, ಕಿಷನ್ ರೆಡ್ಡಿ ಕರ್ನಾಟಕದ ನೆರೆಯ ತೆಲಂಗಾಣ ರಾಜ್ಯದವರು.</p>.<p>ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರೂ ಸಭೆಗಳಲ್ಲಿ ಪಾಲ್ಗೊಳ್ಳಲು ಈಗಾಗಲೇ ಬೆಂಗಳೂರಿನತ್ತ ತೆರಳಿದ್ದಾರೆ.</p>.<p><a href="https://www.prajavani.net/district/chamarajanagara/bs-yediyurappa-resignation-his-follower-from-gundlupete-committed-suicide-852119.html" itemprop="url">ಗುಂಡ್ಲುಪೇಟೆ: ಯಡಿಯೂರಪ್ಪ ಅಭಿಮಾನಿ ಆತ್ಮಹತ್ಯೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>