ಈ ವಿಷಯದ ಬಗ್ಗೆ ಚರ್ಚೆಸಲು ಅವಕಾಶ ಕೋರಿ ನಿಲುವಳಿ ಸೂಚನೆ ಮಂಡಿಸಲು ಮುಂದಾದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ‘ಮೀಸಲಾತಿ ಹೆಚ್ಚಳದ ಪರವಾಗಿ ನಾವಿದ್ದೇವೆ. ಆದರೆ, ನೀವು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿ ಆದೇಶ ಹೊರಡಿಸಿದ್ದೀರಿ. ಸಂವಿಧಾನದ 9ನೇ ವಿಧಿಗೆ ತಿದ್ದುಪಡಿ ತರದೇ ಮೀಸಲಾತಿ ಹೆಚ್ಚಳ ಮಾಡುವುದು ಸಾಧ್ಯವಿಲ್ಲ ಎಂದು ಮೊದಲಿನಿಂದಲೂ ನಾವು ಪ್ರತಿಪಾದಿಸುತ್ತಾ ಬಂದಿದ್ದೇವೆ. ಇದು ಸಂವಿಧಾನಕ್ಕೆ ಸಂಬಂಧಿಸಿದ ವಿಷಯವಾಗಿದ್ದರಿಂದಾಗಿ ಚರ್ಚೆಗೆ ಅವಕಾಶ ಕೊಡಬೇಕು‘ ಎಂದರು. ಸಚಿವ ಜೆ.ಸಿ. ಮಾಧುಸ್ವಾಮಿ ಇದಕ್ಕೆ ಒಪ್ಪಲಿಲ್ಲ. ಕೊನೆಗೆ ಸಿ. ಎಂ ಚರ್ಚೆಗೆ ಒಪ್ಪಿಗೆ ಸೂಚಿಸಿದರು.ಸ್ಪೀಕರ್ ಅದಕ್ಕೆ ಸಮ್ಮತಿಸಿದರು.