ವಿಧಾನ ಪರಿಷತ್ನಲ್ಲಿ ಗುರುವಾರ ಜೆಡಿಎಸ್ನ ಮರಿತಿಬ್ಬೇಗೌಡ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ದೇವರ ಚಿಕ್ಕನಹಳ್ಳಿ ಬಳಿ ನಿರ್ಮಿಸಿದ ಬಿಡಿಎ ಬಡಾವಣೆ ನಿವೇಶನಗಳ ಹಂಚಿಕೆ ರದ್ದು ಮಾಡಲು ಅವಕಾಶ ಕೊಡುವುದಿಲ್ಲ. ಭೂಸ್ವಾಧೀನ, ಬಡಾವಣೆ ನಿರ್ಮಾಣದ ವಿಷಯದಲ್ಲಿ ಹಲವು ನ್ಯೂನತೆಗಳು ಪತ್ತೆಯಾಗಿವೆ. ಅಧಿಕಾರಿಗಳು ಕೋರ್ಟ್ಗೆ ಸೂಕ್ತ ದಾಖಲೆಗಳನ್ನು ಸಲ್ಲಿಸಬೇಕು. ಖಾಸಗಿಯವರ ಜತೆ ಶಾಮೀಲಾದರೆ ಅಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.