ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ತೀವ್ರ ಜ್ವರ: ಮಣಿಪಾಲ್‌ಗೆ ದಾಖಲು

Last Updated 1 ಜೂನ್ 2021, 9:25 IST
ಅಕ್ಷರ ಗಾತ್ರ

ಬೆಂಗಳೂರು: ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರೋಗ್ಯ ತಪಾಸಣೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಂಗಳವಾರ ಬೆಳಿಗ್ಗೆ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ, ಮುಂದಿನ ಎರಡು ದಿನಗಳ ಕಾಲ ವಿಶ್ರಾಂತಿಯಲ್ಲಿ ಪಡೆಯಲಿದ್ದು, ಅವರು ಮಂಗಳವಾರ ಮತ್ತು ಬುಧವಾರ ಭಾಗವಹಿಸಲಿದ್ದ ಎಲ್ಲ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ. ಸಿದ್ದರಾಮಯ್ಯ ಅವರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು ನೆಗೆಟಿವ್ ವರದಿ ಬಂದಿದೆ’ ಎಂದು ಆಪ್ತ ಮೂಲಗಳು ಮಾಹಿತಿ ನೀಡಿವೆ.

ಆದರೆ, ಮಧ್ಯಾಹ್ನ ವೇಳೆಗೆ ಜ್ವರ ಕಡಿಮೆ ಆಗದ ಕಾರಣ, ವೈದ್ಯರ ಸಲಹೆ ಮೇರೆಗೆ ಅವರನ್ನು ಹೆಚ್ಚಿನ ತಪಾಸಣೆಗೆ ಒಳಪಡಿಸಲಾಗಿದೆ ಎಂದೂ ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT