‘ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಈ ಸರ್ಕಾರ ಹೋಗಬೇಕು ಮತ್ತು ಮರು ದಿನವೇ ಮುಖ್ಯಮಂತ್ರಿ ಆಗಬೇಕು ಎಂಬ ತವಕದಲ್ಲಿ ಇದ್ದಾರೆ. ಆದರೆ, ಅವರ ಆ ಕನಸು ನನಸಾಗುವುದಿಲ್ಲ. ಮುಂದಿನ ಬಾರಿಯೂ ಬಿಜೆಪಿ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುವುದಕ್ಕೆ ಸಾಧ್ಯವೇ ಇಲ್ಲ. ಅವರು ಹಾಗೂ ಡಿ.ಕೆ. ಶಿವಕುಮಾರ್ ನಡುವೆಯೇ ಬಹಳಷ್ಟು ಹೋರಾಟ ನಡೆಯುತ್ತಿದೆ’ ಎಂದು ಟೀಕಿಸಿದರು.