ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಮೇಶ ಜಾರಕಿಹೊಳಿ ಹೆಸರು ಬರೆದಿಟ್ಟು ಸಾಯುವಷ್ಟು ಕಿರುಕುಳ: ಯುವತಿ ವಿಡಿಯೊ

Last Updated 27 ಮಾರ್ಚ್ 2021, 3:29 IST
ಅಕ್ಷರ ಗಾತ್ರ

ಬೆಂಗಳೂರು: ಸಿ.ಡಿ. ಪ್ರಕರಣದ ಯುವತಿ ನಾಲ್ಕನೇ ವಿಡಿಯೊವನ್ನು ಶನಿವಾರ ಬೆಳಿಗ್ಗೆ ಹರಿಬಿಟ್ಟಿದ್ದು, ‘ರಮೇಶ ಜಾರಕಿಹೊಳಿ ಹೆಸರು ಬರೆದಿಟ್ಟು ಸಾಯುವಷ್ಟು ನನಗೆ ಕಿರುಕುಳವಾಗುತ್ತಿದೆ’ ಎಂದಿದ್ದಾರೆ.

‘ಮಾರ್ಚ್ 2ರಂದು ಸಿ.ಡಿ. ಹೊರಗೆ ಬರುತ್ತಿದ್ದಂತೆ, ನನಗೆ ಏನು ಮಾಡಬೇಕು ಎಂಬುದು ತಿಳಿಯಲಿಲ್ಲ. ಅವಾಗಲೇ ಸುದ್ದಿವಾಹಿನಿಯಲ್ಲಿದ್ದ ನರೇಶ್ ಅಣ್ಣನನ್ನು ಸಂಪರ್ಕಿಸಿದೆ. ಆತನೇ, ಇದಕ್ಕೆಲ್ಲ ರಾಜಕೀಯ ಬೆಂಬಲ‌ ಬೇಕು. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಜೊತೆ‌ ಮಾತನಾಡೋಣ’ ಎಂದಿದ್ದರು.

‘ಮನೆಯಿಂದಲೂ ನಿರಂತರವಾಗಿ ಕರೆಗಳು ಬರುತ್ತಿದ್ದವು. ಅವರೆಲ್ಲ ಭಯಗೊಂಡಿದ್ದರು. ಅವರನ್ನ ಸಮಾಧಾನ ಮಾಡಿದ್ದೆ. ಮನೆಗೆ ಹೋದರೂ ಡಿ.ಕೆ.ಶಿವಕುಮಾರ್ ಭೇಟಿಯಾಗಲು ಆಗಲಿಲ್ಲ. ವಾಪಸು ಬಂದೆ. ಈಗ ನಾನು ಸುರಕ್ಷಿತವಾಗಿದ್ದೇನೆ’ ಎಂದೂ ಯುವತಿ ವಿಡಿಯೊದಲ್ಲಿ ತಿಳಿಸಿದ್ದಾರೆ.


‘ತಂದೆ-ತಾಯಿ, ಸಹೋದರನ ಮೊಬೈಲ್ ಸಂಭಾಷಣೆ ಎಲ್ಲೆಡೆ ಹರಿದಾಡುತ್ತಿದೆ. ಇದನ್ನು ನೋಡಿದರೆ, ಕುಟುಂಬದವರು ಭಯದಲ್ಲಿರುವಂತೆ ಕಾಣುತ್ತಿದೆ. ದಯವಿಟ್ಟು ಅವರನ್ನು ಪೊಲೀಸರು ರಕ್ಷಿಸಬೇಕು. ಅಮ್ಮ-ಅಪ್ಪ, ಇಬ್ಬರೂ ಸಹೋದರರನ್ನು ಬೆಂಗಳೂರಿಗೆ ಕರೆತಂದು ಭದ್ರತೆ ನೀಡಬೇಕು. ಅವರ ಎದುರು ನಾನು ಪೊಲೀಸರಿಗೆ ಹೇಳಿಕೆ ನೀಡುತ್ತೇನೆ’ ಎಂದೂ ತಿಳಿಸಿದ್ದಾರೆ.

‘ಟಿ.ವಿ.ಯವರು ಯಾವುದೇ ಸುದ್ದಿ ಮಾಡಿದರೂ, ಅದು ನಿಜವೂ ಸುಳ್ಳೂ ಎಂದು ತಿಳಿದುಕೊಂಡು ಮಾಡಬೇಕು. ಇಲ್ಲಸಲ್ಲದ ಸುದ್ದಿ ಹಾಗೂ ಏನು ಮಾಡಲು ಹೋಗಿ ಇನ್ನೇನು ಆಗುತ್ತಿದೆ. ಇದರಿಂದ ತುಂಬಾ ಕಿರುಕುಳವಾಗುತ್ತಿದೆ’ ಎಂದೂ ಯುವತಿ ಹೇಳಿದ್ದಾರೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT