ಸಚಿವ ಸಂಪುಟ ರಚನೆಯ ಸಂದರ್ಭದಲ್ಲಿ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಅವರು ಸಚಿವರಾಗಿ ಅಧಿಕಾರಪದ ಮತ್ತು ಗೋಪ್ಯತಾ ಪ್ರಮಾಣವನ್ನು ಪ್ರತ್ಯೇಕವಾಗಿ ಸ್ವೀಕರಿಸುವ ಬದಲು ಅಧಿಕಾರ ಪದದ ಪ್ರತಿಜ್ಞಾ ವಿಧಿಯನ್ನು ಎರಡು ಬಾರಿ ಸ್ವೀಕರಿಸಿದ್ದರು. ಇದನ್ನು ಗಮನಿಸಿ ರಾಜ್ಯಪಾಲ ಥಾವರ ಚಂದ್ ಗೆಹಲೋತ್ ಅವರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರ ಸಮ್ಮುಖದಲ್ಲಿ ಬುಧವಾರ ಸಂಜೆ ಮತ್ತೊಮ್ಮೆ ಪ್ರಮಾಣ ವಚನ ಬೋಧಿಸಿದರು.