ಟ್ರಸ್ಟ್ ಹೊರತಂದ ಈ ಗ್ರಂಥವನ್ನು 2020ರ ಮಾ.3ರಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಬಿಡುಗಡೆ ಮಾಡಿದ್ದರು. ಸಮಾರಂಭದಲ್ಲಿ ಉಪಸ್ಥಿತರಿದ್ದ ವೀರೇಂದ್ರ ಹೆಗ್ಗಡೆ ಅವರು, ‘ಧರ್ಮದ ಸಾರವನ್ನು ಒಳಗೊಂಡಿರುವ ಈ ಗ್ರಂಥವು ಜಗತ್ತಿನ ಎಲ್ಲ ವಿಶ್ವವಿದ್ಯಾಲಯಗಳನ್ನು ತಲುಪಬೇಕು’ ಎಂಬ ಆಶಯ ವ್ಯಕ್ತಪಡಿಸಿದ್ದರು. ಅದರಂತೆ ಈ ಗ್ರಂಥವನ್ನು ವಿದೇಶಗಳ ಗ್ರಂಥಾಲಯಗಳಿಗೆ ಉಚಿತವಾಗಿ ಪೂರೈಕೆ ಮಾಡುತ್ತಿದ್ದೇವೆ. ಈ ಗ್ರಂಥವು 6 ಸಂಪುಟಗಳಲ್ಲಿ ಹೊರಬಂದಿದ್ದು, ಪ್ರತಿ ಸಂಪುಟ ತಲಾ 750 ಪುಟಗಳನ್ನು ಒಳಗೊಂಡಿದೆ ಎಂದು ಟ್ರಸ್ಟ್ನ ಅಧ್ಯಕ್ಷ ಎಸ್. ಜಿತೇಂದ್ರ ಕುಮಾರ್ ತಿಳಿಸಿದ್ದಾರೆ.