‘ಶಿವಮೊಗ್ಗ ಜಿಲ್ಲೆಯ 31 ಅರಣ್ಯ ಪ್ರದೇಶಗಳಲ್ಲಿ ಸಂತ್ರಸ್ತರು ಕೃಷಿ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಬೇಡಿಕೆ ಮುಂದಿಟ್ಟಿದ್ದಾರೆ. ಈಡಿಗ ಸಮುದಾಯ, ಇತರ ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರೇ ಹೆಚ್ಚು ಸಮಸ್ಯೆಗೆ ಸಿಲುಕಿದ್ದಾರೆ. 1959ರಿಂದಲೂ ಈ ರೈತರ ಹೆಸರು ಕಂದಾಯ ದಾಖಲೆಗಳಲ್ಲಿ ಸೇೆರ್ಪಡೆಯಾಗಿಲ್ಲ. ಇದರಿಂದಾಗಿ, ಕಿಸಾನ್ ಸಮ್ಮಾನ್ ಯೋಜನೆ ಹಾಗೂ ಇತರ ಯೋಜನೆಗಳ ಲಾಭದಿಂದ ಈ ರೈತರು ವಂಚಿತರಾಗಿದ್ದಾರೆ’ ಎಂದು ಗಮನ ಸೆಳೆದರು.