ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಸಂಪುಟ: ಶಾಸಕಿ ಶಶಿಕಲಾ ಜೊಲ್ಲೆ ನೆರವಿಗೆ ಬಂದ ಬಿ.ಎಲ್‌.ಸಂತೋಷ್?

Last Updated 4 ಆಗಸ್ಟ್ 2021, 7:57 IST
ಅಕ್ಷರ ಗಾತ್ರ

ಬೆಂಗಳೂರು: ಶಾಸಕಿ ಶಶಿಕಲಾ ಜೊಲ್ಲೆ ಮತ್ತೊಮ್ಮೆ ಸಂಪುಟ ಸೇರಿರುವುದು ಪಕ್ಷದಲ್ಲಿ ಹಲವರ ಹುಬ್ಬೇರುವಂತೆ ಮಾಡಿದ್ದು, ಜೊಲ್ಲೆ ಹೆಸರು ಪಟ್ಟು ಹಿಡಿದು ಸೇರಿಸುವಲ್ಲಿ ಪಕ್ಷದ ಸಂಘಟನಾ ಕಾರ್ಯದರ್ಶಿ ಬಿ.ಎಲ್‌.ಸಂತೋಷ್ ಅವರ ಪ್ರಮುಖ ಪಾತ್ರ ವಹಿಸಿದ್ದಾರೆ.

ಗೊಲ್ಲ ಸಮುದಾಯಕ್ಕೆ ಸೇರಿದ್ದ ಪೂರ್ಣಿಮಾ ಶ್ರೀನಿವಾಸ್ ಅವರ ಹೆಸರು ಬಹುತೇಕ ಅಂತಿಮಗೊಳಿಸಲಾಗಿತ್ತು. ಆದರೆ, ಸಂತೋಷ್‌ ಅವರು ಜೊಲ್ಲೆಯ ಅವರ ಹೆಸರು ಪಟ್ಟಿಯಿಂದ ಕೈಬಿಡದಂತೆ ನೋಡಿಕೊಂಡರು ಎಂದು ಮೂಲಗಳು ಹೇಳಿವೆ.

ಶಶಿಕಲಾ ಅವರ ಪತಿ ಅಣ್ಣಾ ಸಾಹೇಬ್ ಸಂಸದರೂ ಆಗಿದ್ದಾರೆ. ಕುಟುಂಬ ರಾಜಕಾರಣ ಪ್ರೋತ್ಸಾಹಿಸುವುದಿಲ್ಲ ಎಂದು ಬಿಜೆಪಿ ಹೇಳುತ್ತಲೇ ಒಂದೇ ಮನೆಯ ಇಬ್ಬರಿಗೆ ಅವಕಾಶ ನೀಡಲಾಗಿದೆ. ಭ್ರಷ್ಟಾಚಾರ ಸಹಿಸುವುದಿಲ್ಲ ಎಂದು ಮಾತೃಪೂರ್ಣ ಯೋಜನೆಯಲ್ಲಿ ಮೊಟ್ಟೆ ಸರಬರಾಜು ಟೆಂಡರ್‌ ನೀಡಿಕೆಯಲ್ಲಿ ಕಮಿಷನ್‌ ಪಡೆದ ಆರೋಪಕ್ಕೂ ಒಳಗಾಗಿರುವ ಶಶಿಕಲಾ ಅವರಿಗೆ ಮತ್ತೊಮ್ಮೆ ಸಚಿವ ಸ್ಥಾನ ನೀಡಿದ್ದು ಹೇಗೆ ಎಂಬುದು ಶಾಸಕರೊಬ್ಬರ ಪ್ರಶ್ನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT