ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಝೀರೋ ಟ್ರಾಫಿಕ್‌’ನಲ್ಲಿ ದೌಡಾಯಿಸಿದ ಜೊಲ್ಲೆ

Last Updated 4 ಆಗಸ್ಟ್ 2021, 22:15 IST
ಅಕ್ಷರ ಗಾತ್ರ

ಬೆಂಗಳೂರು: ದೆಹಲಿಯಿಂದ ವಿಮಾನದಲ್ಲಿ ಬರುವುದು ವಿಳಂಬವಾಗಿದ್ದರಿಂದ ಶಶಿಕಲಾ ಜೊಲ್ಲೆ ಅವರು ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜಭವನದವರೆಗೂ ‘ಝೀರೋ ಟ್ರಾಫಿಕ್‌’ (ತಡೆರಹಿತ ಸಂಚಾರ) ಸೌಲಭ್ಯದಲ್ಲಿ ದೌಡಾಯಿಸಿ ಬಂದು ಸಚಿವೆಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಬುಧವಾರ ಮಧ್ಯಾಹ್ನ 2.15ರಿಂದ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ನಿಗದಿಯಾಗಿದ್ದು. ದೆಹಲಿಯಲ್ಲಿದ್ದ ಶಶಿಕಲಾ ಜೊಲ್ಲೆ, ಸಂಪುಟದಲ್ಲಿ ಸ್ಥಾನ ಖಾತರಿಯಾದ ಬಳಿಕ ವಿಮಾನದಲ್ಲಿ ಬೆಂಗಳೂರಿನತ್ತ ಹೊರಟಿದ್ದರು. ಮಧ್ಯಾಹ್ನ 1.30ಕ್ಕೆ ಬೆಂಗಳೂರು ತಲುಪಬೇಕಿದ್ದ ವಿಮಾನ ಅರ್ಧ ಗಂಟೆಗೂ ಹೆಚ್ಚು ತಡವಾಗಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು.

ತಾವು ಬರುವುದು ವಿಳಂಬವಾಗುತ್ತಿರುವ ಕುರಿತು ಶಶಿಕಲಾ ಜೊಲ್ಲೆ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸುದ್ದಿ ಮುಟ್ಟಿಸಿದ್ದರು. ತಕ್ಷಣವೇ ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದ ಮುಖ್ಯಮಂತ್ರಿ, ಜೊಲ್ಲೆ ಅವರ ಸಂಚಾರಕ್ಕೆ ‘ಝೀರೋ ಟ್ರಾಫಿಕ್‌’ ವ್ಯವಸ್ಥೆ ಮಾಡುವಂತೆ ತಿಳಿಸಿದ್ದರು.

ದೆಹಲಿಯಿಂದ ಹೊರಟ ವಿಮಾನ ಬಂದಿಳಿಯುವಷ್ಟರಲ್ಲಿ ಪೊಲೀಸರು ಬೆಂಗಾವಲು ವಾಹನಗಳೊಂದಿಗೆ ಸಿದ್ದವಾಗಿದ್ದರು. ಕೆಂಪೇಗೌಡ ವಿಮಾನ ನಿಲ್ದಾಣ ತಲುಪಿದ ಶಶಿಕಲಾ ಅವರನ್ನು ತಡೆರಹಿತ ಸಂಚಾರ ವ್ಯವಸ್ಥೆಯಡಿ ಕೆಲವೇ ನಿಮಿಷಗಳಲ್ಲಿ ರಾಜಭವನಕ್ಕೆ ಕರೆತರಲಾಯಿತು. ವಾಹನ ಇಳಿದು ಓಡೋಡಿ ರಾಜಭವನದ ಗಾಜಿನಮನೆಗೆ ಹೋದ ಶಾಸಕಿ, ಸಚಿವೆಯಾಗಿ ಪ್ರಮಾಣವಚನ ಸ್ವೀಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT