ಮುಜರಾಯಿ ಇಲಾಖೆಗೆ ಸೇರಿರುವಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುವ ಜಾತ್ರೆಗಳಲ್ಲಿ ಈ ವರೆಗೆ ಹಿಂದೂಯೇತರರು ವ್ಯಾಪಾರ ನಡೆಸುತ್ತಿದ್ದರು. ಇಲ್ಲಿ ಇದೇ 29ರಂದು ಚಂಪಾ ಷಷ್ಠಿ ಹಾಗೂ ಬ್ರಹ್ಮರಥೋತ್ಸವ ನಡೆಯಲಿದೆ. ಹಿಂದೂ ಜಾಗರಣ ವೇದಿಕೆ ಅಳವಡಿಸಿರುವ ಬ್ಯಾನರ್ ತೆರವುಗೊಳಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಗ್ರಾಮ ಸಮಿತಿ ಗ್ರಾಮ ಪಂಚಾಯಿತಿಗೆ ಗುರುವಾರ ಪತ್ರ ಸಲ್ಲಿಸಿದೆ. ಸಾರ್ವಜನಿಕ ಸ್ಥಳದಲ್ಲಿ ಅಳವಡಿಸಿರುವ ಬ್ಯಾನರ್ ಕೋಮು ದ್ವೇಷ ಭಾವನೆಗೆ ಕಾರಣವಾಗಲಿದೆ ಎಂದು ಪಕ್ಷದ ಮುಖಂಡರು ಹೇಳಿದ್ದಾರೆ.