‘ನಮ್ಮ ಪಕ್ಷದಿಂದ ಶಿರಾ ಕ್ಷೇತ್ರದಲ್ಲಿ ಆಯ್ಕೆಯಾಗಿದ್ದ ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಅವರೇ ನಮ್ಮ ಪಕ್ಷದ ಅಭ್ಯರ್ಥಿ. ಇದರಲ್ಲಿ ಯಾವುದೇ ಗೊಂದಲ ಇಲ್ಲ. ಆರ್.ಆರ್.ನಗರ ಕ್ಷೇತ್ರದ ಉಪಚುನಾವಣೆಗೆ ಮೂವರ ಹೆಸರು ಪರಿಶೀಲನೆಯಲ್ಲಿದೆ. ಅಕ್ಟೋಬರ್ 8 ರಂದು ಈ ಸಂಬಂಧ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ. ಚುನಾವಣೆಯಲ್ಲಿ ಸೋಲು ಅಥವಾ ಗೆಲುವು ಇದ್ದದ್ದೇ. ಅಭ್ಯರ್ಥಿಯನ್ನಂತೂ ಕಣಕ್ಕೆ ಇಳಿಸುತ್ತೇವೆ’ ಎಂದರು.