ಹಾಸನ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ದೋಣಿಗಲ್ ನಲ್ಲಿ ಭೂಕುಸಿತ ಮುಂದುವರಿದಿದ್ದು, ಶುಕ್ರವಾರ (ಜು15)ದಿಂದ ಮುಂದಿನ ಆದೇಶದವರೆಗೆ ಎಲ್ಲ ರೀತಿಯ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ.
ಎಲ್ಲ ರೀತಿಯ ಲಘು ವಾಹನಗಳು ಹಾಸನ- ಅರಕಲಗೂಡು- ಕುಶಾಲನಗರ- ಸಂಪಾಜೆ ಮೂಲಕ ಅಥವಾ ಹಾಸನ-ಬೇಲೂರು- ಮೂಡಿಗೆರೆ-ಚಾರ್ಮಾಡಿ ಘಾಟಿ ಮೂಲಕ ಮಂಗಳೂರಿಗೆ ತೆರಳಬೇಕು.
ಭಾರಿ ವಾಹನಗಳು ಈ ಎರಡೂ ಮಾರ್ಗ ಹೊರತುಪಡಿಸಿ ಬೇರೆ ಮಾರ್ಗದಲ್ಲಿ ತೆರಳುವಂತೆ ಹಾಸನ ಜಿಲ್ಲಾಧಿಕಾರಿ ಆರ್. ಗಿರೀಶ್ ಆದೇಶದಲ್ಲಿ ತಿಳಿಸಿದ್ದಾರೆ.