ಶಿರಾಡಿ ಘಾಟ್ ಮೂಲಕ ಆರು ಪಥಗಳ ಸುರಂಗ ಮಾರ್ಗ ನಿರ್ಮಿಸುವ ಬಗ್ಗೆ ಅಧ್ಯಯನ ಕೈಗೊಳ್ಳಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್ಎಚ್ಎಐ) ಗಡ್ಕರಿ ಸೂಚಿಸಿದ್ದಾರೆ. ಎನ್ಎಚ್ಎಐ ರಸ್ತೆ ಕಾಮಗಾರಿ ನಿರ್ವಹಿಸಲಿದ್ದು, ಎರಡು ವರ್ಷಗಳ ಅವಧಿಯಲ್ಲಿಕಾಮಗಾರಿ ಪೂರ್ಣಗೊಳಿಸುವ ಭರವಸೆಯನ್ನೂ ಕೇಂದ್ರ ಸಚಿವರು ನೀಡಿದ್ದಾರೆ. ಈ ಯೋಜನೆಗೆ ಅಗತ್ಯ ಇರುವ ಎಲ್ಲ ಅನುಮೋದನೆ ಹಾಗೂ ಸಹಕಾರವನ್ನು ರಾಜ್ಯ ಸರ್ಕಾರ ನೀಡಲಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.