ಮಧ್ಯಾಹ್ನ 12.45ಕ್ಕೆ ಹಿರಿಯಡಕದ ಶೀರೂರು ಮೂಲಮಠದಲ್ಲಿ ಪಟ್ಟಾಭಿಷೇಕದ ವಿಧಿವಿಧಾನಗಳು ನಡೆದವು. ದ್ವಂದ್ವ ಮಠವಾದ ಸೋದೆ ವಾದಿರಾಜ ಮಠದ ವಿಶ್ವವಲ್ಲಭ ತೀರ್ಥ ಸ್ವಾಮೀಜಿ, ನೂತನ ಯತಿಗೆ ಪಟ್ಟಾಭಿಷೇಕ ಮಾಡಿದರು. ಇದಕ್ಕೂ ಮುನ್ನ ಪುರುಷಸೂಕ್ತ ಹೋಮ, ವಿರಜಾ ಹೋಮ, ವೇದವ್ಯಾಸ ಮಂತ್ರ ಹೋಮ ಸೇರಿ ಧಾರ್ಮಿಕ ವಿಧಿವಿಧಾನಗಳು ನಡೆದವು.