ಹೂವಿನಿಂದ ಅಲಂಕೃತಗೊಂಡಿದ್ದ ಲಿಂಗ ಆಕಾರದ ಮೂರ್ತಿಯ ಮೇಲ್ಬಾಗದಲ್ಲಿ ರಾತ್ರಿ 7.30ರ ಸುಮಾರಿಗೆ ಕಣ್ಣುಗಳ ಆಕಾರದಲ್ಲಿ ಕಲೆ ಕಾಣಿಸಿಕೊಂಡಿದ್ದು, ದೇವರೇ ಕಣ್ಣು ಬಿಟ್ಟಿದ್ದಾನೆಂಬ ವದಂತಿ ಪಸರಿಸತೊಡಗಿತ್ತು. ಇದನ್ನು ಕಾಣಲು ಸುತ್ತಮುತ್ತಲಿನ ನೂರಾರು ಜನರು ದೇವಾಲಯಕ್ಕೆ ಬಂದಿದ್ದು, ಕ್ರಮೇಣ ನೂಕುನುಗ್ಗಲು ಉಂಟಾಯಿತು. ಕ್ರಮೇಣ ಭಕ್ತರ ಸಾಲು ಬೆಳೆಯುತ್ತ ಹೋಯಿತು. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಜನರನ್ನು ನಿಯಂತ್ರಿಸುವ ಪ್ರಯತ್ನ ನಡೆಸಿದರು.