‘ಶಿವಾಜಿ ಮಹಾರಾಜರ ಮೇಲಿನ ಅಭಿಮಾನದ ಸಂಕೇತವಾಗಿ ಅವರ ಜನ್ಮದಿನವನ್ನು ಆಚರಿಸಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಇಡೀ ರಾಜ್ಯದಲ್ಲಿ ಶಿವಾಜಿ ಮಹಾರಾಜರ ತತ್ವಾದರ್ಶಗಳನ್ನು ಹಾಗೂ ರಾಷ್ಟ್ರಭಕ್ತಿಯ ಭಾವನೆ ತುಂಬುವ ಕಾರ್ಯಗಳನ್ನು ಕೈಗೊಳ್ಳಲಾಗುವುದು. ಧ್ವನಿ ಇಲ್ಲದ ದುರ್ಬಲ ವರ್ಗಗಳನ್ನು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಅಭಿವೃದ್ಧಿಗೊಳಿಸುವುದು ಸರ್ಕಾರದ ಉದ್ದೇಶವಾಗಿದೆ’ ಎಂದು ತಿಳಿಸಿದರು.