ಬನಹಟ್ಟಿಯಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ಅದ್ಧೂರಿಯಾಗಿ ಸ್ವಾಗತಿಸಿದರು. ತೆರೆದ ವಾಹನದಲ್ಲಿ ಮೆರವಣಿಗೆಯಲ್ಲಿ ಸಭಾಂಗಣಕ್ಕೆ ಕರೆ ತರಲಾಯಿತು. ಈ ವೇಳೆ ಸೇಬು ಹಣ್ಣುಗಳಿಂದ ಮಾಡಿದ ಬೃಹತ್ ಹಾರವನ್ನು ಕ್ರೇನ್ ಮೂಲಕ ಹಾಕಿ, ಪಟಾಕಿ ಸಿಡಿಸಿ, ಹೂವು ಎರಚಿ ಬೆಂಬಲಿಗರು ಅಭಿಮಾನ ಮೆರೆದರು. ಜಮಖಂಡಿ ಶಾಸಕಆನಂದ ನ್ಯಾಮಗೌಡ, ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ಸಚಿನ್ ಮಿಗಾ ಇದ್ದರು.