‘ನಾವು ಅಹಿಂಸೆಯಲ್ಲಿ ನಂಬಿಕೆ ಇಟ್ಟವರು. ಯಾರೇ ಕೊಲೆಯಾದರೂ ತಪ್ಪಿತಸ್ಥರಿಗೆ ಕಠಿಣವಾದ ಶಿಕ್ಷೆಯಾಗಬೇಕು. ಹರ್ಷ ಅವರ ಕೊಲೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಕೊಲೆ ಮಾಡಿದವರಿಗೆ ಗಲ್ಲು ಶಿಕ್ಷೆಯಾಗಬೇಕು. ಆರೋಪಿಗಳು ಯಾವುದೇ ಸಮುದಾಯ, ಸಂಘಟನೆಗೆ ಸೇರಿದ್ದರೂ ಸರ್ಕಾರ ಕಠಿಣವಾದ ಕ್ರಮ ಕೈಗೊಳ್ಳಬೇಕು. ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಈಶ್ವರಪ್ಪ, ಯುಡಿಯೂರಪ್ಪ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಜಿಲ್ಲೆ ಇದು. ಇದು ಏನನ್ನು ಸೂಚಿಸುತ್ತದೆ. ಕಾನೂನು ಸುವ್ಯವಸ್ಥೆ ರಾಜ್ಯದಲ್ಲಿ ಹಾಳಾಗಿರುವುದಕ್ಕೆ ಇದು ಉದಾಹರಣೆ. ಈಶ್ವರಪ್ಪ, ಆರಗ ಜ್ಞಾನೇಂದ್ರ ಇದಕ್ಕೆ ಜವಾಬ್ದಾರರು’ ಎಂದರು.