ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರಿಕಾಂಬಾ ಜಾತ್ರೆ: ಮಳಿಗೆ ಮೇಲೆ ಕೇಸರಿ ಬಾವುಟ ಕಡ್ಡಾಯ

Last Updated 22 ಮಾರ್ಚ್ 2022, 19:31 IST
ಅಕ್ಷರ ಗಾತ್ರ

ಶಿವಮೊಗ್ಗ: ಇಲ್ಲಿಯ ಕೋಟೆ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನಿರಾಕರಿಸಲಾಗಿದ್ದು, ಮಳಿಗೆ ತೆರೆಯುವ ಹಿಂದೂ ವ್ಯಾಪಾರಿಗಳು ಅಂಗಡಿಯ ಮೇಲೆ ಕೇಸರಿ ಬಾವುಟ ಹಾರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

ಪ್ರತಿ ಎರಡು ವರ್ಷಗಳಿಗೆ ಒಮ್ಮೆ ಐದು ದಿನಗಳ ಕಾಲ ನಡೆಯುವ ಈ ಜಾತ್ರಾ ಮಹೋತ್ಸವದಲ್ಲಿ ಹಿಂದಿನಿಂದಲೂ ಎಲ್ಲ ಧರ್ಮದ ವ್ಯಾಪಾರಿಗಳು ಭಾಗವಹಿಸುತ್ತಿದ್ದರು. ಆದರೆ, ಈ ಬಾರಿಯ ಜಾತ್ರಾ ಮಹೋತ್ಸವದಲ್ಲಿ ಬಜರಂಗದಳದ ಮುಖಂಡರು ಮಳಿಗೆಗಳ ನಿರ್ವಹಣೆಯ ಟೆಂಡರ್‌ ಪಡೆದಿದ್ದು, ಮುಸ್ಲಿಮರಿಗೆ ಮಳಿಗೆ ಹಾಕಲು ಅವಕಾಶ ನೀಡಿಲ್ಲ.

ಈ ಬಾರಿ ಗೊಂದಲ ನಿರ್ಮಾಣವಾದ ಕಾರಣ ಹೆಚ್ಚಿನ ವ್ಯಾಪಾರಿಗಳು ಬಂದಿಲ್ಲ. ಮಳಿಗೆ ತೆರೆಯುವ ಎಲ್ಲ ವ್ಯಾಪಾರಿಗಳು ಈಗ ಕೇಸರಿ ಬಾವುಟ ಹಾಕಿದ್ದಾರೆ. ಆ ಮೂಲಕ ಜಾತ್ರೆಯಲ್ಲಿ ಮುಸ್ಲಿಮರು ಭಾಗವಹಿಸಿಲ್ಲ ಎಂಬ ಸಂದೇಶವನ್ನು ಸಾರಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT