‘ಆದರೆ, ಯತೀಶ್ಕುಮಾರ್ ಅವರು, ಈಗಾಗಲೇ ಅಂತಿಮಗೊಂಡಿದ್ದ ಉಪ ವಲಯ ಅರಣ್ಯಾಧಿಕಾರಿ ಮತ್ತು ಮೋಜಣಿದಾರರ ಜೇಷ್ಠತಾ ಪಟ್ಟಿಯನ್ನು ಮೇಲಾಧಿಕಾರಿಗಳ ಅನುಮತಿ ಇಲ್ಲದೆ ಪರಿಷ್ಕರಿಸಿದ್ದಾರೆ. ಜೇಷ್ಠತಾ ಪಟ್ಟಿ ಪರಿಷ್ಕರಿಸಲು ನ್ಯಾಯಾಲಯ, ಸರ್ಕಾರ ಅಥವಾ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯಿಂದ ಆದೇಶ ಪಡೆದಿಲ್ಲ. ಅಧಿಕಾರ ದುರುಪಯೋಗ ಮಾಡಿಕೊಂಡು ಬಡ್ತಿ ನೀಡಲಾಗಿದ್ದು, ರದ್ದುಪಡಿಸಬೇಕು ಎಂಬ ಒತ್ತಾಯ ಸಾರ್ವಜನಿಕರಿಂದಲೂ ಬಂದಿವೆ’ ಎಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.