ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಪೋಕ್ಸೊ ಕಾಯ್ದೆಯಡಿ ಅ.13ರಂದು ಪ್ರಕರಣ ದಾಖಲಾಗಿತ್ತು. ಮುರುಘಾಮಠದ ಶಿವಮೂರ್ತಿ ಶರಣರು, ಹಾಸ್ಟೆಲ್ ವಾರ್ಡನ್, ಮಠದ ಉತ್ತರಾಧಿಕಾರಿ ಬಾಲಕ, ಮಾಜಿ ವ್ಯವಸ್ಥಾಪಕ ಪರಮಶಿವಯ್ಯ, ವಕೀಲ ಗಂಗಾಧರ, ಶರಣರ ಸಹಾಯಕ ಮಹಾಲಿಂಗ, ಅಡುಗೆಭಟ್ಟ ಕರಿಬಸಪ್ಪ ವಿರುದ್ಧ ದೂರು ದಾಖಲಾಗಿತ್ತು. ಶಿವಮೂರ್ತಿ ಶರಣರು ಹಾಗೂ ಹಾಸ್ಟೆಲ್ ವಾರ್ಡನ್ ಹೊರತುಪಡಿಸಿ ಉಳಿದವರ ಮೇಲೆ ಆರೋಪ ಸಾಬೀತುಪಡಿಸುವ ಸಾಕ್ಷ್ಯಗಳು ಲಭ್ಯವಾಗಿಲ್ಲ ಎಂದು ತನಿಖಾಧಿಕಾರಿ ಅಭಿಪ್ರಾಯಪಟ್ಟಿದ್ದಾರೆ.