ಬೆಂಗಳೂರು: ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರ ಮೇಲಿನ ಆರೋಪದ ವಿಚಾರಣೆಯನ್ನು ತ್ವರಿತವಾಗಿ, ಪಾರದರ್ಶಕವಾಗಿ ನಡೆಸಬೇಕು ಎಂದು ಸಾಹಿತಿಗಳಾದ ಕೆ.ಮರುಳಸಿದ್ದಪ್ಪ, ಜಿ.ರಾಮಕೃಷ್ಣ, ರಾಜೇಂದ್ರ ಚೆನ್ನಿ, ಅಲ್ಲಮಪ್ರಭು ಬೆಟ್ಟದೂರು, ಜೆ.ಎಸ್.ಪಾಟೀಲ, ಶಂಕರ ಹಲಗತ್ತಿ, ಕೆ.ನೀಲಾ, ಸಿದ್ದನಗೌಡ ಪಾಟೀಲ ಒತ್ತಾಯಿಸಿದ್ದಾರೆ.