63 ವರ್ಷದ ಶಿವರಾಮ ಶೆಟ್ಟಿ,ಆಧುನಿಕ ಮತ್ತು ಮಧ್ಯಕಾಲೀನ ಕನ್ನಡ ಸಾಹಿತ್ಯ, ಸಾಹಿತ್ಯ ಸಿದ್ಧಾಂತ, ಜಾನಪದ, ತುಳು ಜಾನಪದ, ಸಾಂಸ್ಕೃತಿಕ ಅಧ್ಯಯನ ಹೀಗೆ ಹಲವು ವಿಷಯಗಳಲ್ಲಿ ತಜ್ಞರೆನಿಸಿಕೊಂಡಿದ್ದಾರೆ. 50ಕ್ಕೂ ಹೆಚ್ಚು ಸಂಶೋಧನಾ ಲೇಖನಗಳನ್ನು ಬರೆದಿದ್ದಾರೆ.70ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದ್ದಾರೆ. ‘ತುಳುನಾಡಿನ ಸಸ್ಯ ಜಾನಪದ’ ಅವರ ಪಿಎಚ್ಡಿ ಪ್ರಬಂಧ. ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ನಿವೃತ್ತರಾಗಿದ್ದಾರೆ.