ಸಮಿತಿ ನೀಡುತ್ತಿರುವ ಪ್ರಥಮ ಪ್ರಶಸ್ತಿ ಇದಾಗಿದ್ದು, ಪ್ರಶಸ್ತಿಯು ₹ 25 ಸಾವಿರ ನಗದು ಒಳಗೊಂಡಿದೆ. ಇದೇ 7ರಂದು ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ ಬೆಳಿಗ್ಗೆ 10 ಗಂಟೆಗೆ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಸಾಹಿತಿ ಹಂ.ಪ. ನಾಗರಾಜಯ್ಯ ಸಮಾರಂಭ ಉದ್ಘಾಟಿಸಲಿದ್ದಾರೆ. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಸಮಿತಿಯ ಕುಮಾರ್ ಕೆ.ಎಚ್. ತಿಳಿಸಿದ್ದಾರೆ.