‘ಪಾಲಿಕೆ ಮುಂಭಾಗದ ಕನ್ನಡ ಧ್ವಜವನ್ನು ಕೂಡಲೇ ತೆರವುಗೊಳಿಸಬೇಕು.ಇಲ್ಲವಾದಲ್ಲಿ ನಾವು ಬೆಳಗಾವಿ ಮಹಾನಗರಪಾಲಿಕೆ ಎದುರು ಭಗವಾಧ್ವಜ ಸ್ಥಾಪಿಸುತ್ತೇವೆ’ ಎಂದು ‘ಜೈ ಭವಾನಿ, ಜೈ ಶಿವಾಜಿ’ ಎಂಬ ಘೋಷಣೆಗಳೊಂದಿಗೆ ನುಗ್ಗುತ್ತಿದ್ದರು. ಶಿವಸೇನಾ ಕೊಲ್ಹಾಪುರ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ ದಾವಣೆ ನೇತೃತ್ವದಲ್ಲಿ ಕಾರ್ಯಕರ್ತರು ಕೊಲ್ಹಾಪುರ ಜಿಲ್ಲೆಯ ಚಂದಗಡ ತಾಲ್ಲೂಕಿನ ಕಡೆಯಿಂದ ಬಂದು ಜಮಾಯಿಸಿದ್ದರು. ಮುನ್ಸೂಚನೆ ಇದ್ದಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದ ಪೊಲೀಸರು, ಆ ಕಾರ್ಯಕರ್ತರನ್ನು ತಡೆ
ದರು. ಹೀಗಾಗಿ, ಅರ್ಧ ಗಂಟೆಯವರೆಗೆ ರಸ್ತೆಯಲ್ಲೇ ಪ್ರತಿಭಟಿಸಿ ಮರಳಿದರು. ಮುಂಜಾಗ್ರತಾ ಕ್ರಮವಾಗಿ ಗಡಿಯಲ್ಲಿ ಪೊಲೀಸ್ ಭದ್ರತೆ ಮುಂದುವರಿಸಲಾಗಿದೆ.