ಸಿನಿಮಾ ನೋಡುವ ಸಂದರ್ಭ ಮುಂದಿನ ಕುರ್ಚಿಯ ಮೇಲೆ ವಸಂತಕುಮಾರ ಕಾಲಿಟ್ಟಿದ್ದ. ಮುಂದಿನ ಕುರ್ಚಿಯಲ್ಲಿದ್ದ ಆರೋಪಿ ಕಾಲು ತೆಗೆಯುವಂತೆ ಹೇಳಿದ್ದಾನೆ. ಈ ಸಂದರ್ಭ ಇಬ್ಬರ ನಡುವೆ ಮಾತಿನ ಚಕಮಕಿ ಉಂಟಾಗಿ, ಜಗಳ ನಡೆದಿದೆ. ನಂತರ ಆರೋಪಿ ಹೊರಗಡೆ ಹೋಗಿ ಹತ್ತು ನಿಮಿಷದ ನಂತರ ಮತ್ತೆ ಚಿತ್ರಮಂದಿರದ ಒಳಗೆ ಬಂದು, ವಸಂತಕುಮಾರನ ಮೇಲೆ ಪಿಸ್ತೂಲಿನಿಂದ ಮೂರು ಸುತ್ತು ಗುಂಡು ಹಾರಿಸಿದ್ದಾನೆ.