<p><strong>ಹೊಳಲ್ಕೆರೆ: </strong>ಪಟ್ಟಣದ ಬಟ್ಟೆ ಅಂಗಡಿಯ ವ್ಯಾಪಾರಿಯ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಗುಂಡಿನ ಸದ್ದು ಕೇಳಿ ಪಟ್ಟಣ ಬೆಚ್ಚಿಬಿದ್ದಿದೆ.</p>.<p>ಮೂಲ್ಸಿಂಗ್ (35) ಕೊಲೆಯಾದ ವ್ಯಾಪಾರಿ. ಹೊಸದುರ್ಗ ರಸ್ತೆಯ ಅನ್ನಪೂರ್ಣೇಶ್ವರಿ ಹೋಟೆಲ್ ಸಮೀಪ ‘ಪ್ರಿಯದರ್ಶಿನಿ ಟೆಕ್ಸ್ಟೈಲ್’ ಎಂಬ ಬಟ್ಟೆ ಅಂಗಡಿ ಇಟ್ಟುಕೊಂಡಿದ್ದರು.</p>.<p>ಅಂಗಡಿಯ ಬಾಗಿಲು ಮುಚ್ಚಲು ಮೂಲ್ಸಿಂಗ್ ಸಿದ್ದರಾಗಿದ್ದರು. ರಾತ್ರಿ 9.30ರ ಸುಮಾರಿಗೆ ಅಂಗಡಿಯ ಮುಂಭಾಗದಲ್ಲಿ ಇಟ್ಟಿದ್ದ ಬಟ್ಟೆಗಳನ್ನು ಒಳಗೆ ಎತ್ತಿ ಇಡುವಾಗ ಗುಂಡು ಹಾರಿಸಲಾಗಿದೆ. ಇಬ್ಬರು ದುಷ್ಕರ್ಮಿಗಳು ಈ ಕೃತ್ಯ ನಡೆಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ವ್ಯಾಪಾರಿಯ ಕೊಲೆಗೆ ದುಷ್ಕರ್ಮಿಗಳು ಬಹುದಿನಗಳಿಂದ ಹೊಂಚು ಹಾಕಿರುವ ಸಾಧ್ಯತೆ ಇದೆ. ಕೆಸರಗಟ್ಟೆ ಕೆರೆ ಪಕ್ಕದಲ್ಲೇ ಬಟ್ಟೆ ಅಂಗಡಿ ಇರುವುದರಿಂದ ವ್ಯಾಪಾರಿ ಹೊರಗೆ ಬರುವ ಸಮಯಕ್ಕೆ ದುಷ್ಕರ್ಮಿಗಳು ಕಾದಿದ್ದಾರೆ. ಗುಂಡು ಹಾರಿಸಿ ಕಾಲ್ನಡಿಗೆಯಲ್ಲಿಯೇ ಪರಾರಿಯಾಗಿದ್ದಾರೆ ಎಂದು ಸ್ಥಳೀಯರು ವಿವರಿಸಿದ್ದಾರೆ.</p>.<p>2018ರ ನ.28ರಂದು ರಾಮಗಿರಿಯಲ್ಲಿ ನಡೆದ ಚಿನ್ನದ ವ್ಯಾಪಾರಿ ಕಲ್ಯಾಣ ಸಿಂಗ್ ಕೊಲೆ ಪ್ರಕರಣದಲ್ಲಿ ಮೂಲ್ ಸಿಂಗ್ನನ್ನು ಪೊಲೀಸರು ಬಂಧಿಸಿದ್ದರು. ಬಾಡಿಗೆ ಮನೆಯ ವಿಚಾರದಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿತ್ತು. ಮೂಲ್ಸಿಂಗ್ ಹಾಗೂ ಇಬ್ಬರು ಸಹೋದರರೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಈ ಪ್ರಕರಣದಲ್ಲಿ ಜೈಲು ಸೇರಿದ್ದ ಮೂಲ್ಸಿಂಗ್ ಜಾಮೀನು ಮೇಲೆ ಹೊರಗೆ ಬಂದಿದ್ದನು. ಕಲ್ಯಾಣ್ಸಿಂಗ್ ಹತ್ಯೆಗೆ ಪ್ರತಿಕಾರವಾಗಿ ಈ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಡಿವೈಎಸ್ಪಿ ಪಾಂಡುರಂಗ, ಸಿಪಿಐ ರವೀಶ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಷಯ ತಿಳಿದು ಪಟ್ಟಣದ ಜನರು ಶೂಟ್ಔಟ್ ನಡೆದ ಸ್ಥಳದಲ್ಲಿ ಜಮಾಯಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳಲ್ಕೆರೆ: </strong>ಪಟ್ಟಣದ ಬಟ್ಟೆ ಅಂಗಡಿಯ ವ್ಯಾಪಾರಿಯ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಗುಂಡಿನ ಸದ್ದು ಕೇಳಿ ಪಟ್ಟಣ ಬೆಚ್ಚಿಬಿದ್ದಿದೆ.</p>.<p>ಮೂಲ್ಸಿಂಗ್ (35) ಕೊಲೆಯಾದ ವ್ಯಾಪಾರಿ. ಹೊಸದುರ್ಗ ರಸ್ತೆಯ ಅನ್ನಪೂರ್ಣೇಶ್ವರಿ ಹೋಟೆಲ್ ಸಮೀಪ ‘ಪ್ರಿಯದರ್ಶಿನಿ ಟೆಕ್ಸ್ಟೈಲ್’ ಎಂಬ ಬಟ್ಟೆ ಅಂಗಡಿ ಇಟ್ಟುಕೊಂಡಿದ್ದರು.</p>.<p>ಅಂಗಡಿಯ ಬಾಗಿಲು ಮುಚ್ಚಲು ಮೂಲ್ಸಿಂಗ್ ಸಿದ್ದರಾಗಿದ್ದರು. ರಾತ್ರಿ 9.30ರ ಸುಮಾರಿಗೆ ಅಂಗಡಿಯ ಮುಂಭಾಗದಲ್ಲಿ ಇಟ್ಟಿದ್ದ ಬಟ್ಟೆಗಳನ್ನು ಒಳಗೆ ಎತ್ತಿ ಇಡುವಾಗ ಗುಂಡು ಹಾರಿಸಲಾಗಿದೆ. ಇಬ್ಬರು ದುಷ್ಕರ್ಮಿಗಳು ಈ ಕೃತ್ಯ ನಡೆಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ವ್ಯಾಪಾರಿಯ ಕೊಲೆಗೆ ದುಷ್ಕರ್ಮಿಗಳು ಬಹುದಿನಗಳಿಂದ ಹೊಂಚು ಹಾಕಿರುವ ಸಾಧ್ಯತೆ ಇದೆ. ಕೆಸರಗಟ್ಟೆ ಕೆರೆ ಪಕ್ಕದಲ್ಲೇ ಬಟ್ಟೆ ಅಂಗಡಿ ಇರುವುದರಿಂದ ವ್ಯಾಪಾರಿ ಹೊರಗೆ ಬರುವ ಸಮಯಕ್ಕೆ ದುಷ್ಕರ್ಮಿಗಳು ಕಾದಿದ್ದಾರೆ. ಗುಂಡು ಹಾರಿಸಿ ಕಾಲ್ನಡಿಗೆಯಲ್ಲಿಯೇ ಪರಾರಿಯಾಗಿದ್ದಾರೆ ಎಂದು ಸ್ಥಳೀಯರು ವಿವರಿಸಿದ್ದಾರೆ.</p>.<p>2018ರ ನ.28ರಂದು ರಾಮಗಿರಿಯಲ್ಲಿ ನಡೆದ ಚಿನ್ನದ ವ್ಯಾಪಾರಿ ಕಲ್ಯಾಣ ಸಿಂಗ್ ಕೊಲೆ ಪ್ರಕರಣದಲ್ಲಿ ಮೂಲ್ ಸಿಂಗ್ನನ್ನು ಪೊಲೀಸರು ಬಂಧಿಸಿದ್ದರು. ಬಾಡಿಗೆ ಮನೆಯ ವಿಚಾರದಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿತ್ತು. ಮೂಲ್ಸಿಂಗ್ ಹಾಗೂ ಇಬ್ಬರು ಸಹೋದರರೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಈ ಪ್ರಕರಣದಲ್ಲಿ ಜೈಲು ಸೇರಿದ್ದ ಮೂಲ್ಸಿಂಗ್ ಜಾಮೀನು ಮೇಲೆ ಹೊರಗೆ ಬಂದಿದ್ದನು. ಕಲ್ಯಾಣ್ಸಿಂಗ್ ಹತ್ಯೆಗೆ ಪ್ರತಿಕಾರವಾಗಿ ಈ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಡಿವೈಎಸ್ಪಿ ಪಾಂಡುರಂಗ, ಸಿಪಿಐ ರವೀಶ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಷಯ ತಿಳಿದು ಪಟ್ಟಣದ ಜನರು ಶೂಟ್ಔಟ್ ನಡೆದ ಸ್ಥಳದಲ್ಲಿ ಜಮಾಯಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>